<p><strong>ಕನಕಪುರ: </strong>‘ಪ್ರಪಂಚವೇ ಗಾಂಧೀಜಿಯನ್ನು ಅಹಿಂಸಾವಾದಿ ಮತ್ತು ಶಾಂತಿಯ ಆರಾಧಕರೆಂದು ಸ್ಮರಿಸುತ್ತಿದ್ದರೆ ಬಿಜೆಪಿಯವರು ಗಾಂಧಿಯನ್ನು ಕೊಂದ ಹಿಂಸೆಯ ಪ್ರತಿರೂಪವಾದ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುತ್ತಾರೆ. ಅವರಿಗೆ ರಾಷ್ಟ್ರಪಿತನ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದೇಶವನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಲು ಹಲವು ರೀತಿಯಲ್ಲಿ ಹೋರಾಟ ನಡೆದಿವೆ. ಆದರೆ, ಅಂತಿಮವಾಗಿ ಗಾಂಧೀಜಿ ಅವರು ತಮ್ಮ ಅಹಿಂಸಾ ಮತ್ತು ಉಪವಾಸ ಸತ್ಯಾಗ್ರಹದ ಮೂಲಕವೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದರು.</p>.<p>ಆರ್ಎಸ್ಎಸ್ನವರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ಸುಳ್ಳಿನ ರಾಜಕಾರಣ ಮಾಡಿ ದ್ವೇಷ ಬಿತ್ತುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಜನರನ್ನು ಧಾರ್ಮಿಕವಾಗಿ ಭಾವುಕರನ್ನಾಗಿ ಮಾಡುತ್ತಿದ್ದಾರೆ. ರಾಮಮಂದಿರ ಕಟ್ಟಿ ಜೈಶ್ರೀರಾಮ್ ಎಂದರೆ ದೇಶದ ಜನರ ಕಷ್ಟ ದೂರವಾಗುತ್ತದೆಯೇ ಎಂದು<br />ಪ್ರಶ್ನಿಸಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಕೃಷ್ಣಮೂರ್ತಿ, ಎಂ.ಡಿ. ವಿಜಯದೇವು, ನಗರಸಭೆ ಮಾಜಿ ಅಧ್ಯಕ್ಷರಾದ ಮುಕ್ಬುಲ್ ಪಾಷ, ರಾಮಚಂದ್ರ, ಕೆ.ಎನ್. ದಿಲೀಪ್, ಮುಖಂಡರಾದ ಪುರುಷೋತ್ತಮ್, ರಾಯಸಂದ್ರ ರವಿ, ಅನಿಲ್, ಕೆ.ಎಂ. ರಾಜೇಂದ್ರ, ವೆಂಕಟೇಶ್, ಕಿರಣ್, ಧನಲಕ್ಷ್ಮಿ, ಲಕ್ಷ್ಮೀ ಗೋವಿಂದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ: </strong>‘ಪ್ರಪಂಚವೇ ಗಾಂಧೀಜಿಯನ್ನು ಅಹಿಂಸಾವಾದಿ ಮತ್ತು ಶಾಂತಿಯ ಆರಾಧಕರೆಂದು ಸ್ಮರಿಸುತ್ತಿದ್ದರೆ ಬಿಜೆಪಿಯವರು ಗಾಂಧಿಯನ್ನು ಕೊಂದ ಹಿಂಸೆಯ ಪ್ರತಿರೂಪವಾದ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುತ್ತಾರೆ. ಅವರಿಗೆ ರಾಷ್ಟ್ರಪಿತನ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಎಸ್. ರವಿ ಹೇಳಿದರು.</p>.<p>ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಏರ್ಪಡಿಸಿದ್ದ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ದೇಶವನ್ನು ಬ್ರಿಟಿಷರ ದಾಸ್ಯದಿಂದ ಬಿಡುಗಡೆಗೊಳಿಸಲು ಹಲವು ರೀತಿಯಲ್ಲಿ ಹೋರಾಟ ನಡೆದಿವೆ. ಆದರೆ, ಅಂತಿಮವಾಗಿ ಗಾಂಧೀಜಿ ಅವರು ತಮ್ಮ ಅಹಿಂಸಾ ಮತ್ತು ಉಪವಾಸ ಸತ್ಯಾಗ್ರಹದ ಮೂಲಕವೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ ಎಂದರು.</p>.<p>ಆರ್ಎಸ್ಎಸ್ನವರು ದೇಶದಲ್ಲಿ ಧರ್ಮದ ಹೆಸರಿನಲ್ಲಿ ಸುಳ್ಳಿನ ರಾಜಕಾರಣ ಮಾಡಿ ದ್ವೇಷ ಬಿತ್ತುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗಿ ಜನರನ್ನು ಧಾರ್ಮಿಕವಾಗಿ ಭಾವುಕರನ್ನಾಗಿ ಮಾಡುತ್ತಿದ್ದಾರೆ. ರಾಮಮಂದಿರ ಕಟ್ಟಿ ಜೈಶ್ರೀರಾಮ್ ಎಂದರೆ ದೇಶದ ಜನರ ಕಷ್ಟ ದೂರವಾಗುತ್ತದೆಯೇ ಎಂದು<br />ಪ್ರಶ್ನಿಸಿದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಆರ್. ಕೃಷ್ಣಮೂರ್ತಿ, ಎಂ.ಡಿ. ವಿಜಯದೇವು, ನಗರಸಭೆ ಮಾಜಿ ಅಧ್ಯಕ್ಷರಾದ ಮುಕ್ಬುಲ್ ಪಾಷ, ರಾಮಚಂದ್ರ, ಕೆ.ಎನ್. ದಿಲೀಪ್, ಮುಖಂಡರಾದ ಪುರುಷೋತ್ತಮ್, ರಾಯಸಂದ್ರ ರವಿ, ಅನಿಲ್, ಕೆ.ಎಂ. ರಾಜೇಂದ್ರ, ವೆಂಕಟೇಶ್, ಕಿರಣ್, ಧನಲಕ್ಷ್ಮಿ, ಲಕ್ಷ್ಮೀ ಗೋವಿಂದಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>