<p><strong>ರಾಮನಗರ</strong>: ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ೂ ಸ್ವಾಧೀನ ವಿರೋಧಿಸಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿದರು.</p><p>ನಗರದ ಕಂದಾಯ ಭವನದ ಆವರಣದಲ್ಲಿ ಜಮಾಯಿಸಿದ ಮಹಿಳೆಯರು, ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಬಳಿಯ ಪ್ರತಿಭಟನಾ ಸ್ಥಳದವರೆಗೆ ಪಾದಯಾತ್ರೆಯಲ್ಲಿ ಬಂದರು. ಮಾರ್ಗದುದ್ದಕ್ಕೂ ಸರ್ಕಾರ ಮತ್ತು ಜಿಲ್ಲಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>ಪಾದಯಾತ್ರೆಯುದ್ದಕ್ಕೂ ಸರ್ಕಾರದ ವಿರುದ್ಧ ಹಾಗೂ ಉಪನಗರಕ್ಕೆ ಭೂ ಸ್ವಾಧೀನ ವಿರುದ್ಧದ ಪ್ರತಿಭಟನಾ ಫಲಕಗಳು ಗಮನ ಸೆಳೆದವು. ತಮಟೆ ಮತ್ತು ಡೊಳ್ಳು ಸದ್ದು ಮೊಳಗಿತು. ನಿಗದಿಪಡಿಸಿರುವ ಸ್ಥಳದಲ್ಲೇ ಪ್ರತಿಭಟನೆ ನಡೆಸುವಂತೆ ಪೊಲೀಸರು ಮನವೊಲಿಸಲು ಯತ್ನಿಸಿದರು.</p><p>ಅದಕ್ಕೆ ಒಪ್ಪದ ರೈತರು ಡಿ.ಸಿ ಕಚೇರಿ ಪ್ರವೇಶದ್ವಾರದ ಎದುರೇ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದು, ಕಚೇರಿಯತ್ತ ಬಂದರು. ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದಂತೆ ನಿಷೇಧಾಜ್ಞೆ ಇರುವ ಕಾರಣ, ಬಿಸಿಲು ಲೆಕ್ಕಿಸದೆ ಪ್ರವೇಶದ್ವಾರದ ಎದುರಿನ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p><p>ಇದರಿಂದಾಗಿ ಬೆಂಗಳೂರು- ಮೈಸೂರು ಹಳೆ ಹೆದ್ದಾರಿ ರಸ್ತೆಯ ಒಂದು ಭಾಗದಲ್ಲಿ ಪೊಲೀಸರು ವಾಹನಗಳ ಸಂಚಾರ ಬಂದ್ ಮಾಡಿ, ಮತ್ತೊಂದು ಭಾಗದಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.</p><p>ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ಮಲ್ಲಯ್ಯ, ಜಯ ಕರ್ನಾಟಕ ಜನಪರ ವೇದಿಕೆಯ ಕುಮಾರಸ್ವಾಮಿ, ಭೈರಮಂಗಲ- ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಭೂ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ ಮುಖಂಡರು ಮಾತನಾಡಿದರು.</p><p>ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸ್ಥಳದಲ್ಲೇ ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು, ಐವತ್ತಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ತಾಲ್ಲೂಕಿನ ಬಿಡದಿ ಹೋಬಳಿಯಲ್ಲಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ ಯೋಜನೆಗೆ ೂ ಸ್ವಾಧೀನ ವಿರೋಧಿಸಿ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ನಗರದಲ್ಲಿ ಜಿಲ್ಲಾಡಳಿತದ ವಿರುದ್ಧ ಬುಧವಾರ ಪ್ರತಿಭಟನೆ ನಡೆಸಿದರು.</p><p>ನಗರದ ಕಂದಾಯ ಭವನದ ಆವರಣದಲ್ಲಿ ಜಮಾಯಿಸಿದ ಮಹಿಳೆಯರು, ರೈತರು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು, ನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿ ಬಳಿಯ ಪ್ರತಿಭಟನಾ ಸ್ಥಳದವರೆಗೆ ಪಾದಯಾತ್ರೆಯಲ್ಲಿ ಬಂದರು. ಮಾರ್ಗದುದ್ದಕ್ಕೂ ಸರ್ಕಾರ ಮತ್ತು ಜಿಲ್ಲಾಧಿಕಾರಿ ವಿರುದ್ಧ ಘೋಷಣೆಗಳನ್ನು ಕೂಗಿದರು.</p><p>ಪಾದಯಾತ್ರೆಯುದ್ದಕ್ಕೂ ಸರ್ಕಾರದ ವಿರುದ್ಧ ಹಾಗೂ ಉಪನಗರಕ್ಕೆ ಭೂ ಸ್ವಾಧೀನ ವಿರುದ್ಧದ ಪ್ರತಿಭಟನಾ ಫಲಕಗಳು ಗಮನ ಸೆಳೆದವು. ತಮಟೆ ಮತ್ತು ಡೊಳ್ಳು ಸದ್ದು ಮೊಳಗಿತು. ನಿಗದಿಪಡಿಸಿರುವ ಸ್ಥಳದಲ್ಲೇ ಪ್ರತಿಭಟನೆ ನಡೆಸುವಂತೆ ಪೊಲೀಸರು ಮನವೊಲಿಸಲು ಯತ್ನಿಸಿದರು.</p><p>ಅದಕ್ಕೆ ಒಪ್ಪದ ರೈತರು ಡಿ.ಸಿ ಕಚೇರಿ ಪ್ರವೇಶದ್ವಾರದ ಎದುರೇ ಪ್ರತಿಭಟನೆ ನಡೆಸುವುದಾಗಿ ಪಟ್ಟು ಹಿಡಿದು, ಕಚೇರಿಯತ್ತ ಬಂದರು. ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದಂತೆ ನಿಷೇಧಾಜ್ಞೆ ಇರುವ ಕಾರಣ, ಬಿಸಿಲು ಲೆಕ್ಕಿಸದೆ ಪ್ರವೇಶದ್ವಾರದ ಎದುರಿನ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.</p><p>ಇದರಿಂದಾಗಿ ಬೆಂಗಳೂರು- ಮೈಸೂರು ಹಳೆ ಹೆದ್ದಾರಿ ರಸ್ತೆಯ ಒಂದು ಭಾಗದಲ್ಲಿ ಪೊಲೀಸರು ವಾಹನಗಳ ಸಂಚಾರ ಬಂದ್ ಮಾಡಿ, ಮತ್ತೊಂದು ಭಾಗದಲ್ಲಿ ಎರಡೂ ಕಡೆಯ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.</p><p>ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ. ಮಲ್ಲಯ್ಯ, ಜಯ ಕರ್ನಾಟಕ ಜನಪರ ವೇದಿಕೆಯ ಕುಮಾರಸ್ವಾಮಿ, ಭೈರಮಂಗಲ- ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಭೂ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇನೆ ಮುಖಂಡರು ಮಾತನಾಡಿದರು.</p><p>ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸ್ಥಳದಲ್ಲೇ ಹತ್ತಕ್ಕೂ ಹೆಚ್ಚು ಪೊಲೀಸ್ ವಾಹನಗಳು, ಐವತ್ತಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>