ರಾಮನಗರ: ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದಲ್ಲಿ ಶನಿವಾರ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ಕುಮಾರಸ್ವಾಮಿ ಮುಂದೆಯೇ ರೈತರೊಬ್ಬರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಜಮೀನಿನ ಖಾತೆ ಮಾಡಿಕೊಡಲು ಅಧಿಕಾರಿಗಳು ಲಕ್ಷ ಲಕ್ಷ ಲಂಚ ಕೇಳುತ್ತಿದ್ದಾರೆ. ಖಾತೆ ಮಾಡಿಕೊಡಲು ಸೂಚಿಸಿ ಎಂದು ಕರ್ಲಹಳ್ಳಿ ಗ್ರಾಮದ ರೈತ ಸಿದ್ದೇಗೌಡ ಅಳಲು ತೋಡಿಕೊಂಡರು.
ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ ವಾರದೊಳಗೆ ಅಧಿಕಾರಿಗಳನ್ನು ರೈತನ ಬಳಿಗೆ ಕಳುಹಿಸುವುದಾಗಿ ಭರವಸೆ ನೀಡಿದರು.