<p><strong>ಕನಕಪುರ</strong>: ತಾಲ್ಲೂಕನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ವಿವಿಧ ಸಂಘಟನೆಯಿಂದ ತಾಲ್ಲೂಕು ಆಡಳಿತದ ವಿರುದ್ಧ ಗುರುವಾರ ಬಾರುಕೋಲು ಚಳವಳಿ ನಡೆಸಲಾಯಿತು.</p>.<p>ರೈತ ಸಂಘಟನೆ ಮುಖಂಡರು ಕೋಟೆ ಗಣಪತಿ ದೇವಾಲಯದಿಂದ ತಾಲ್ಲೂಕು ಕಚೇರಿವರೆಗೆ ಬಾರುಕೋಲು ಹಿಡಿದು ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂದೆ ಜಮಾವಣಿಗೊಂಡು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳು ಬಗೆಹರಿದರೆ ಯಾರೂ ಕೂಡ ತಾಲ್ಲೂಕು ಕಚೇರಿಗೆ ಬರುವುದಿಲ್ಲ. ಭೂ ವ್ಯಾಜ್ಯ ಕಡಿಮೆಯಾದರೆ ತಾಲ್ಲೂಕು ಕಚೇರಿಯಲ್ಲಿ ರೈತರಿಗೇನು ಕೆಲಸ ಇರುವುದಿಲ್ಲ. ಪೊಲೀಸ್ ಠಾಣೆ ನ್ಯಾಯಾಲಯಗಳಿಗೆ ಅಲೆದಾಡುವುದು ತಪ್ಪುತ್ತದೆ. ಆ ನಿಟ್ಟಿನಲ್ಲಿ ತಾಲ್ಲೂಕು ಆಡಳಿತವು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ‘ಭ್ರಷ್ಟಾಚಾರ ವ್ಯವಸ್ಥೆಯನ್ನು ತಡೆಗಟ್ಟಬೇಕಾದ ಅಧಿಕಾರಿಗಳೇ ಭ್ರಷ್ಟರಾದರೆ ಹೇಗೆ ಸರಿಪಡಿಸುವುದು. ಅಧಿಕಾರಿಗಳು ಒಂದು ಸ್ಥಳದಲ್ಲಿ ಮೂರು ವರ್ಷಕ್ಕಿಂತ ಹೆಚ್ಚಿಗೆ ಇರಬಾರದು. ಆದರೆ ತಾಲ್ಲೂಕಿನಲ್ಲಿ ಪ್ರಾರಂಭದಿಂದ ನಿವೃತ್ತಿಯಾಗುವವರೆಗೂ ಒಂದೇ ಕಡೆ ಕೆಲಸ ಮಾಡುತ್ತಾರೆ. 3 ವರ್ಷಕ್ಕಿಂತ ಹೆಚ್ಚಿಗೆ ಇರುವ ಅಧಿಕಾರಿ, ನೌಕರರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು: ಎಂದು ಆಗ್ರಹಿಸಿದರು.</p>.<p>ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಂಚಾಲಕ ಕುಮಾರಸ್ವಾಮಿ ಮಾತನಾಡಿ, ‘ತಾಲ್ಲೂಕಿನಲ್ಲಿ ಜನಪರ ಆಡಳಿತ ನಡೆಯುತ್ತಿಲ್ಲ. ಅಧಿಕಾರಿಗಳು ಏಕಪಕ್ಷೀಯವಾಗಿ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ’ ಎಂದು ದೂರಿದರು.</p>.<p>‘ರೈತರ ಪರವಾಗಿ ಕೆಲಸ ಮಾಡಬೇಕಾದ ಅಧಿಕಾರಿಗಳು ಲಂಚ ಪಡೆದು ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ. ತಾಲ್ಲೂಕಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ತಹಶೀಲ್ದಾರ್ ಅವರು ರೈತರಿಗೆ ಮತ್ತು ಸಾರ್ವಜನಿಕರ ಪರವಾಗಿ ಅಧಿಕಾರಿಗಳು, ನೌಕರರು ಕೆಲಸ ಮಾಡುವಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕೆ.ಮಲ್ಲಯ್ಯ, ಮಂಡ್ಯ ಕಾರ್ಯದರ್ಶಿ ರವಿ, ರಮ್ಯ ರಾಮಣ್ಣ, ಚಂದ್ರಶೇಖರ್, ಕೃಷ್ಣಯ್ಯ, ತಿಮ್ಮೇಗೌಡ, ಪುಟ್ಟಸ್ವಾಮಿಗೌಡ ಉಪಸ್ಥಿತರಿದ್ದರು.</p>
<p><strong>ಕನಕಪುರ</strong>: ತಾಲ್ಲೂಕನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವಂತೆ ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ವಿವಿಧ ಸಂಘಟನೆಯಿಂದ ತಾಲ್ಲೂಕು ಆಡಳಿತದ ವಿರುದ್ಧ ಗುರುವಾರ ಬಾರುಕೋಲು ಚಳವಳಿ ನಡೆಸಲಾಯಿತು.</p>.<p>ರೈತ ಸಂಘಟನೆ ಮುಖಂಡರು ಕೋಟೆ ಗಣಪತಿ ದೇವಾಲಯದಿಂದ ತಾಲ್ಲೂಕು ಕಚೇರಿವರೆಗೆ ಬಾರುಕೋಲು ಹಿಡಿದು ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂದೆ ಜಮಾವಣಿಗೊಂಡು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ರೈತರು ಮತ್ತು ಸಾರ್ವಜನಿಕರ ಸಮಸ್ಯೆಗಳು ಬಗೆಹರಿದರೆ ಯಾರೂ ಕೂಡ ತಾಲ್ಲೂಕು ಕಚೇರಿಗೆ ಬರುವುದಿಲ್ಲ. ಭೂ ವ್ಯಾಜ್ಯ ಕಡಿಮೆಯಾದರೆ ತಾಲ್ಲೂಕು ಕಚೇರಿಯಲ್ಲಿ ರೈತರಿಗೇನು ಕೆಲಸ ಇರುವುದಿಲ್ಲ. ಪೊಲೀಸ್ ಠಾಣೆ ನ್ಯಾಯಾಲಯಗಳಿಗೆ ಅಲೆದಾಡುವುದು ತಪ್ಪುತ್ತದೆ. ಆ ನಿಟ್ಟಿನಲ್ಲಿ ತಾಲ್ಲೂಕು ಆಡಳಿತವು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ರೈತ ಸಂಘದ ರಾಜ್ಯ ಸಂಚಾಲಕ ಚೀಲೂರು ಮುನಿರಾಜು ಮಾತನಾಡಿ, ‘ಭ್ರಷ್ಟಾಚಾರ ವ್ಯವಸ್ಥೆಯನ್ನು ತಡೆಗಟ್ಟಬೇಕಾದ ಅಧಿಕಾರಿಗಳೇ ಭ್ರಷ್ಟರಾದರೆ ಹೇಗೆ ಸರಿಪಡಿಸುವುದು. ಅಧಿಕಾರಿಗಳು ಒಂದು ಸ್ಥಳದಲ್ಲಿ ಮೂರು ವರ್ಷಕ್ಕಿಂತ ಹೆಚ್ಚಿಗೆ ಇರಬಾರದು. ಆದರೆ ತಾಲ್ಲೂಕಿನಲ್ಲಿ ಪ್ರಾರಂಭದಿಂದ ನಿವೃತ್ತಿಯಾಗುವವರೆಗೂ ಒಂದೇ ಕಡೆ ಕೆಲಸ ಮಾಡುತ್ತಾರೆ. 3 ವರ್ಷಕ್ಕಿಂತ ಹೆಚ್ಚಿಗೆ ಇರುವ ಅಧಿಕಾರಿ, ನೌಕರರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು: ಎಂದು ಆಗ್ರಹಿಸಿದರು.</p>.<p>ಜಯ ಕರ್ನಾಟಕ ಜನಪರ ವೇದಿಕೆ ರಾಜ್ಯ ಸಂಚಾಲಕ ಕುಮಾರಸ್ವಾಮಿ ಮಾತನಾಡಿ, ‘ತಾಲ್ಲೂಕಿನಲ್ಲಿ ಜನಪರ ಆಡಳಿತ ನಡೆಯುತ್ತಿಲ್ಲ. ಅಧಿಕಾರಿಗಳು ಏಕಪಕ್ಷೀಯವಾಗಿ ಉಳ್ಳವರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ’ ಎಂದು ದೂರಿದರು.</p>.<p>‘ರೈತರ ಪರವಾಗಿ ಕೆಲಸ ಮಾಡಬೇಕಾದ ಅಧಿಕಾರಿಗಳು ಲಂಚ ಪಡೆದು ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ. ತಾಲ್ಲೂಕಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಕ್ಕೆ ಇದು ಸಾಕ್ಷಿಯಾಗಿದ್ದು ತಹಶೀಲ್ದಾರ್ ಅವರು ರೈತರಿಗೆ ಮತ್ತು ಸಾರ್ವಜನಿಕರ ಪರವಾಗಿ ಅಧಿಕಾರಿಗಳು, ನೌಕರರು ಕೆಲಸ ಮಾಡುವಂತೆ ಕ್ರಮ ವಹಿಸಬೇಕು’ ಎಂದು ತಿಳಿಸಿದರು.</p>.<p>ಕೆ.ಮಲ್ಲಯ್ಯ, ಮಂಡ್ಯ ಕಾರ್ಯದರ್ಶಿ ರವಿ, ರಮ್ಯ ರಾಮಣ್ಣ, ಚಂದ್ರಶೇಖರ್, ಕೃಷ್ಣಯ್ಯ, ತಿಮ್ಮೇಗೌಡ, ಪುಟ್ಟಸ್ವಾಮಿಗೌಡ ಉಪಸ್ಥಿತರಿದ್ದರು.</p>