<p><strong>ಬಿಡದಿ</strong>: ಅವರಗೆರೆ ಗ್ರಾಮದಲ್ಲಿ ಭಾನುವಾರ ಕರ್ನಾಟಕ ರೈತ ಸಂಘದ ಶಾಖೆಯನ್ನು ರಾಜ್ಯಾಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ಉದ್ಘಾಟಿಸಿದರು.</p>.<p>ನಂತರ ಸಂಘದ ರಾಜ್ಯ, ಜಿಲ್ಲೆ ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ರಾಜ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್, ರಾಮನಗರ ಜಿಲ್ಲಾಧ್ಯಕ್ಷರಾಗಿ ಜಯರಾಮ್, ಉಪಾಧ್ಯಕ್ಷರಾಗಿ ಗುರುವಯ್ಯ ಹಾಗೂ ಇನ್ನಿತರ ಪದಾಧಿಕಾರಿಗಳನ್ನು ಇದೇ ವೇಳೆ ನೇಮಕ ಮಾಡಲಾಯಿತು.</p>.<p>ಶಾಖೆ ಉದ್ಘಾಟಿಸಿ ಮಾತನಾಡಿದ ತುಂಬೇನಹಳ್ಳಿ ಶಿವಕುಮಾರ್, ‘ಕಂದಾಯ ಹಾಗೂ ಭೂಮಾಪನ ಇಲಾಖೆಯಲ್ಲಿ ರೈತರಿಗೆ ಪಹಣಿ, ತಿದ್ದುಪಡಿ, ಸರ್ವೇ, ದಾಖಲಾತಿ ಕೆಲಸ ಮಾಡಿಕೊಡುವ ಅಧಿಕಾರಿಗಳಿಂದ ಕಿರುಕುಳ ಎದುರಾಗುತ್ತಿದೆ. ಈ ರೀತಿ ರೈತರಿಗೆ ಕಿರುಕುಳ ಮುಂದುವರೆದರೆ ಪ್ರತಿಭಟನೆ ಮಾಡಿ ಕಂದಾಯ ಹಾಗೂ ಭೂಮಾಪನ ಇಲಾಖೆಗೆ ಬೀಗ ಹಾಕಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿಡದಿ</strong>: ಅವರಗೆರೆ ಗ್ರಾಮದಲ್ಲಿ ಭಾನುವಾರ ಕರ್ನಾಟಕ ರೈತ ಸಂಘದ ಶಾಖೆಯನ್ನು ರಾಜ್ಯಾಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ಉದ್ಘಾಟಿಸಿದರು.</p>.<p>ನಂತರ ಸಂಘದ ರಾಜ್ಯ, ಜಿಲ್ಲೆ ಹಾಗೂ ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ರಾಜ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್, ರಾಮನಗರ ಜಿಲ್ಲಾಧ್ಯಕ್ಷರಾಗಿ ಜಯರಾಮ್, ಉಪಾಧ್ಯಕ್ಷರಾಗಿ ಗುರುವಯ್ಯ ಹಾಗೂ ಇನ್ನಿತರ ಪದಾಧಿಕಾರಿಗಳನ್ನು ಇದೇ ವೇಳೆ ನೇಮಕ ಮಾಡಲಾಯಿತು.</p>.<p>ಶಾಖೆ ಉದ್ಘಾಟಿಸಿ ಮಾತನಾಡಿದ ತುಂಬೇನಹಳ್ಳಿ ಶಿವಕುಮಾರ್, ‘ಕಂದಾಯ ಹಾಗೂ ಭೂಮಾಪನ ಇಲಾಖೆಯಲ್ಲಿ ರೈತರಿಗೆ ಪಹಣಿ, ತಿದ್ದುಪಡಿ, ಸರ್ವೇ, ದಾಖಲಾತಿ ಕೆಲಸ ಮಾಡಿಕೊಡುವ ಅಧಿಕಾರಿಗಳಿಂದ ಕಿರುಕುಳ ಎದುರಾಗುತ್ತಿದೆ. ಈ ರೀತಿ ರೈತರಿಗೆ ಕಿರುಕುಳ ಮುಂದುವರೆದರೆ ಪ್ರತಿಭಟನೆ ಮಾಡಿ ಕಂದಾಯ ಹಾಗೂ ಭೂಮಾಪನ ಇಲಾಖೆಗೆ ಬೀಗ ಹಾಕಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>