ಗ್ರಾಮದ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಜಮೀನಿಗೆ ಕಾಡಾನೆಗಳ ಹಿಂಡು ದಾಳಿ ಮಾಡಿದ್ದು, 20ಕ್ಕೂ ಹೆಚ್ಚು ಮಾವಿನ ಮರಗಳು ನಾಶವಾಗಿವೆ. ಜೊತೆಗೆ ಅಕ್ಕಪಕ್ಕ ಜಮೀನಿನಲ್ಲಿ ಬೆಳೆದಿದ್ದ ತೆಂಗಿನಮರಗಳು ನೆಲಕ್ಕುರುಳಿವೆ. ಪಕ್ಕದ ಜಮೀನಿನ ಸೀಮೆಹುಲ್ಲು ಬೆಳೆಯನ್ನು ತಿಂದು, ತುಳಿದು ಹಾಕಿ ಚೆಲ್ಲಾಪಿಲ್ಲಿ ಮಾಡಿವೆ.