ಕೆಲವು ದಿನಗಳಿಂದ ಯೂರಿಯಾದ ಕೃತಕ ಅಭಾವ ಸೃಷ್ಟಿಯಾಗಿದ್ದು, ಹಾರೋಹಳ್ಳಿಗೆ ಯೂರಿಯಾ ಪೂರೈಕೆಯಾಗಿದೆ ಎಂಬ ಮಾಹಿತಿ ಲಭ್ಯವಾಯಿತು. ಒಂದು ಲೋಡ್ ಯೂರಿಯಾದಿಂದ 400 ಮಂದಿಗೆ ಪೂರೈಸಬಹುದು. ಹೀಗಾಗಿ ತಮಗೆ ಯೂರಿಯಾ ಸಿಗುವುದಿಲ್ಲ ಎಂಬ ಆತಂಕದಿಂದ ರೈತರು ಬೆಳಗಿನ ಜಾವ 4 ಗಂಟೆಯಿಂದಲೇ ರಸಗೊಬ್ಬರ ಅಂಗಡಿ ಮುಂದೆ ಸಾಲುಗಟ್ಟಿ ನಿಂತರು.ಇದರಿಂದ ರಸ್ತೆಯಲ್ಲಿ ದಟ್ಟಣೆಹೆಚ್ಚಾಗಿ ಸಾರ್ವಜನಿಕರ ಓಡಾಟ, ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.