ಕೃಷಿ ಹೊಂಡದ ಸುತ್ತಲೂ ಜನ, ಜಾನುವಾರು ರಕ್ಷಿಸಿಕೊಳ್ಳಲು ಮುಳ್ಳುತಂತಿ ಬೇಲಿ ನಿರ್ಮಿಸಿಕೊಳ್ಳಲು ಸೂಚಿಸಲಾಗಿದೆ. ಆದರೂ, ರೈತಾಪಿ ಜನರು ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಮತ್ತೊಂದೆಡೆ ಕೃಷಿ ಇಲಾಖೆಯ ಸ್ಥಳೀಯ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡುತ್ತಿಲ್ಲ. ಇದು ಕೂಡ ರೈತರು ಹೊಂಡದ ನಿರ್ವಹಣೆಗೆ ಹಿಂದೇಟು ಹಾಕುತ್ತಿರುವುದರಲ್ಲಿ ಪ್ರಮುಖ ಕಾರಣವಾಗಿದೆ.