ಕಾರ್ಮಿಕ ಹಾಗೂ ರೈತ ಪರ ಸಂಘಟನೆ ಮತ್ತು ಕನ್ನಡಪರ ಸಂಘಟನೆಗಳು ಸಾಂಕೇತಿಕವಾಗಿ ಹೆದ್ದಾರಿ ತಡೆ ನಡೆಸಲಿವೆ. ರೈತ ಸಂಘದಿಂದ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಹೆದ್ದಾರಿ ತಡೆ ಕಾರ್ಯಕ್ರಮವಿದೆ. ಮಾಗಡಿ ತಾಲ್ಲೂಕಿನಲ್ಲಿ ಕುದೂರು ಹ್ಯಾಂಡ್ಪೋಸ್ಟ್ ಬಳಿ, ಚನ್ನಪಟ್ಟಣದಲ್ಲಿ ಸಾತನೂರು ಸರ್ಕಲ್ ಬಳಿ, ಕನಕಪುರದಲ್ಲಿ ಹೆದ್ದಾರಿ ಬಳಿ ಹಾಗೂ ರಾಮನಗರದ ಐಜೂರು ವೃತ್ತದಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ 28ರಂದು ಕರೆ ನೀಡಿರುವ ಕರ್ನಾಟಕ ಬಂದ್ ಬೆಂಬಲಿಸಲು ನಿರ್ಧರಿಸಿರುವುದಾಗಿ ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.