<p><strong>ಕನಕಪುರ:</strong> ರಾಜ್ಯ ಸರ್ಕಾರವು ಸಾತನೂರು ಹೋಬಳಿ ಕೇಂದ್ರವನ್ನು ನೂತನ ತಾಲ್ಲೂಕಾಗಿ ಹಾಗೂ ಉಪ ನಗರವಾಗಿ ಎರಡು ತಿಂಗಳಲ್ಲಿ ಘೋಷಣೆ ಮಾಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಾಡಳ್ಳಿ ಅನುಕುಮಾರ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಸಾತನೂರು ಹೋಬಳಿ, ಕುರುಬಳ್ಳಿ ಗ್ರಾಮದಲ್ಲಿ ನೂತನ ಗ್ರಾಮ ಶಾಖೆಯನ್ನು ಮತ್ತು ರೈತ ಸಂಘದ ನಾಮಫಲಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತೀರ ಹಿಂದುಳಿದಿರುವಂತಹ ಸಾತನೂರು ಹೋಬಳಿಯನ್ನು ನೂತನ ತಾಲ್ಲೂಕಾಗಿ ರಚನೆ ಮಾಡುವಂತೆ ಹಲವು ವರ್ಷಗಳಿಂದ ಈ ಹೋರಾಟವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಅಸ್ತಿತ್ವಕ್ಕೆ ಬಂದ ಸರ್ಕಾರಗಳು ಸಾತನೂರು ನೂತನ ತಾಲ್ಲೂಕಾಗಿ ರಚನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾತನೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿ ನಿಧಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಈಗಿನ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ, ಈಗಲಾದರೂ ಅವರು ಸಾತನೂರನ್ನು ಉಪನಗರವಾಗಿ ತಾಲ್ಲೂಕು ಕೇಂದ್ರವಾಗಿ ರಚನೆ ಮಾಡಬೇಕೆಂದು ಆಗ್ರಹಿಸಿದರು.</p>.<p>ನೂತನ ತಾಲ್ಲೂಕಾಗಿ ರಚನೆ ಮಾಡಲು ಎರಡು ತಿಂಗಳ ಗಡುವು ನೀಡಲಾಗುವುದು, ಅಷ್ಟರೊಳಗೆ ನೂತನ ತಾಲ್ಲೂಕಿನ ರಚನೆ ಮಾಡದಿದ್ದರೆ ರೈತ ಸಂಘದಿಂದ ಸಾತನೂರು ಹೋಬಳಿ ಕೇಂದ್ರದಲ್ಲಿ ಬೃಹತ್ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಅಧ್ಯಕ್ಷ ಶಿವ ಗೂಳಿಗೌಡ, ಉಪಾಧ್ಯಕ್ಷ ಪುಟ್ಟಸ್ವಾಮಿ, ಸಾತನೂರು ಹೋಬಳಿ ಅಧ್ಯಕ್ಷ ರಮೇಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಧನಂಜಯ, ಕಸಬಾ ಅಧ್ಯಕ್ಷ ನಾರಾಯಣ್, ಸಂಘಟನಾ ಕಾರ್ಯದರ್ಶಿ ಪ್ರದೀಪ್, ಶೇಖರ್ ಸೇರಿದಂತೆ ರೈತ ಮುಖಂಡರು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ರಾಜ್ಯ ಸರ್ಕಾರವು ಸಾತನೂರು ಹೋಬಳಿ ಕೇಂದ್ರವನ್ನು ನೂತನ ತಾಲ್ಲೂಕಾಗಿ ಹಾಗೂ ಉಪ ನಗರವಾಗಿ ಎರಡು ತಿಂಗಳಲ್ಲಿ ಘೋಷಣೆ ಮಾಡಬೇಕು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಕಾಡಳ್ಳಿ ಅನುಕುಮಾರ್ ಒತ್ತಾಯಿಸಿದರು.</p>.<p>ತಾಲ್ಲೂಕಿನ ಸಾತನೂರು ಹೋಬಳಿ, ಕುರುಬಳ್ಳಿ ಗ್ರಾಮದಲ್ಲಿ ನೂತನ ಗ್ರಾಮ ಶಾಖೆಯನ್ನು ಮತ್ತು ರೈತ ಸಂಘದ ನಾಮಫಲಕವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.</p>.<p>ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ತೀರ ಹಿಂದುಳಿದಿರುವಂತಹ ಸಾತನೂರು ಹೋಬಳಿಯನ್ನು ನೂತನ ತಾಲ್ಲೂಕಾಗಿ ರಚನೆ ಮಾಡುವಂತೆ ಹಲವು ವರ್ಷಗಳಿಂದ ಈ ಹೋರಾಟವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ ಅಸ್ತಿತ್ವಕ್ಕೆ ಬಂದ ಸರ್ಕಾರಗಳು ಸಾತನೂರು ನೂತನ ತಾಲ್ಲೂಕಾಗಿ ರಚನೆ ಮಾಡುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಾತನೂರು ವಿಧಾನಸಭಾ ಕ್ಷೇತ್ರವನ್ನು ಪ್ರತಿ ನಿಧಿಸುತ್ತಿದ್ದ ಡಿ.ಕೆ.ಶಿವಕುಮಾರ್ ಅವರು ಈಗಿನ ರಾಜ್ಯ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದಾರೆ, ಈಗಲಾದರೂ ಅವರು ಸಾತನೂರನ್ನು ಉಪನಗರವಾಗಿ ತಾಲ್ಲೂಕು ಕೇಂದ್ರವಾಗಿ ರಚನೆ ಮಾಡಬೇಕೆಂದು ಆಗ್ರಹಿಸಿದರು.</p>.<p>ನೂತನ ತಾಲ್ಲೂಕಾಗಿ ರಚನೆ ಮಾಡಲು ಎರಡು ತಿಂಗಳ ಗಡುವು ನೀಡಲಾಗುವುದು, ಅಷ್ಟರೊಳಗೆ ನೂತನ ತಾಲ್ಲೂಕಿನ ರಚನೆ ಮಾಡದಿದ್ದರೆ ರೈತ ಸಂಘದಿಂದ ಸಾತನೂರು ಹೋಬಳಿ ಕೇಂದ್ರದಲ್ಲಿ ಬೃಹತ್ ಹೋರಾಟವನ್ನು ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಾಲ್ಲೂಕು ಅಧ್ಯಕ್ಷ ಶಿವ ಗೂಳಿಗೌಡ, ಉಪಾಧ್ಯಕ್ಷ ಪುಟ್ಟಸ್ವಾಮಿ, ಸಾತನೂರು ಹೋಬಳಿ ಅಧ್ಯಕ್ಷ ರಮೇಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಧನಂಜಯ, ಕಸಬಾ ಅಧ್ಯಕ್ಷ ನಾರಾಯಣ್, ಸಂಘಟನಾ ಕಾರ್ಯದರ್ಶಿ ಪ್ರದೀಪ್, ಶೇಖರ್ ಸೇರಿದಂತೆ ರೈತ ಮುಖಂಡರು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>