<p><strong>ಚನ್ನಪಟ್ಟಣ:</strong> ‘ನಮ್ಮ ಜಮೀನುಗಳ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಬಲವಂತವಾಗಿ ನಮ್ಮನ್ನು ಒಕ್ಕಲೆಬ್ಬಿಸಲು ಕೆಲವರು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿ ನಗರದ ಮಂಗಳವಾರಪೇಟೆ ರೈತ ಮಹಿಳೆಯರು ಹಾಗೂ ರೈತ ಸಂಘಟನೆ ಸದಸ್ಯರು ತಾಲ್ಲೂಕು ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು. </p>.<p>‘75 ವರ್ಷಗಳಿಂದ ಈ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ನಮ್ಮನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು’ ಎಂದು ಪ್ರತಿಭಟನನಿರತರು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು. <br><br>‘24 ಜನರಿಗೆ 75 ವರ್ಷದ ಹಿಂದೆಯೆ 17.24 ಎಕರೆ ಜಮೀನು ಸರ್ಕಾರದಿಂದ ಮಂಜೂರಾಗಿದೆ. ಅಂದಿನಿಂದ 24 ಜನರು ಭೂಮಿಯ ಅನುಭೋಗದಲ್ಲಿದ್ದಾರೆ. ಆದರೆ ಮಂಗಳವಾರಪೇಟೆಯ ಕೆಲವರು ಏಕಾಏಕಿ ಬಂದು ಈ ಭೂಮಿ ನಮಗೆ ಸೇರಿದ್ದು ಎಂದು ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.<br><br>ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅದನ್ನು ಕಡೆಗಣಿಸಿ ರೈತರನ್ನು ಒಕ್ಕಲೆಬ್ಬಿಸಲು ಯತ್ನಿಸಲಾಗುತ್ತಿದೆ. ಇದರಲ್ಲಿ ಅಧಿಕಾರಿಗಳ ಕೈವಾಡವೂ ಇದೆ. ತಾಲ್ಲೂಕು ಹಾಗೂ ಜಿಲ್ಲಾಡಳಿತ ನ್ಯಾಯ ಕೊಡಿಸಬೇಕು ಎಂದು ರೈತ ಸಂಘದ ಮುಖಂಡೆ ಅನಸೂಯಮ್ಮ ಒತ್ತಾಯಿಸಿದರು. <br><br>ರೈತ ಮಹಿಳೆ ಮಂಗಳವಾರಪೇಟೆ ರತ್ನಮ್ಮ, ರೈತಸಂಘದ ಮುಖಂಡರಾದ ಅಮ್ಮಳ್ಳಿದೊಡ್ಡಿ ರಾಮೇಗೌಡ, ಸಿಂಗರಾಜಿಪುರ ದೇವರಾಜು, ಮಂಗಳವಾರಪೇಟೆ ವಿಶ್ವ, ಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ‘ನಮ್ಮ ಜಮೀನುಗಳ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಖಾತೆ ಮಾಡಿಸಿಕೊಂಡು ಬಲವಂತವಾಗಿ ನಮ್ಮನ್ನು ಒಕ್ಕಲೆಬ್ಬಿಸಲು ಕೆಲವರು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿ ನಗರದ ಮಂಗಳವಾರಪೇಟೆ ರೈತ ಮಹಿಳೆಯರು ಹಾಗೂ ರೈತ ಸಂಘಟನೆ ಸದಸ್ಯರು ತಾಲ್ಲೂಕು ಕಚೇರಿ ಎದುರು ಸೋಮವಾರ ಧರಣಿ ನಡೆಸಿದರು. </p>.<p>‘75 ವರ್ಷಗಳಿಂದ ಈ ಭೂಮಿಯಲ್ಲಿ ಬೇಸಾಯ ಮಾಡುತ್ತಿರುವ ನಮ್ಮನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು’ ಎಂದು ಪ್ರತಿಭಟನನಿರತರು ತಹಶೀಲ್ದಾರ್ಗೆ ಮನವಿ ಪತ್ರ ಸಲ್ಲಿಸಿದರು. <br><br>‘24 ಜನರಿಗೆ 75 ವರ್ಷದ ಹಿಂದೆಯೆ 17.24 ಎಕರೆ ಜಮೀನು ಸರ್ಕಾರದಿಂದ ಮಂಜೂರಾಗಿದೆ. ಅಂದಿನಿಂದ 24 ಜನರು ಭೂಮಿಯ ಅನುಭೋಗದಲ್ಲಿದ್ದಾರೆ. ಆದರೆ ಮಂಗಳವಾರಪೇಟೆಯ ಕೆಲವರು ಏಕಾಏಕಿ ಬಂದು ಈ ಭೂಮಿ ನಮಗೆ ಸೇರಿದ್ದು ಎಂದು ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಪ್ರತಿಭಟನಾನಿರತರು ಆರೋಪಿಸಿದರು.<br><br>ಜಿಲ್ಲಾಧಿಕಾರಿಗಳ ಆದೇಶವಿದ್ದರೂ ಅದನ್ನು ಕಡೆಗಣಿಸಿ ರೈತರನ್ನು ಒಕ್ಕಲೆಬ್ಬಿಸಲು ಯತ್ನಿಸಲಾಗುತ್ತಿದೆ. ಇದರಲ್ಲಿ ಅಧಿಕಾರಿಗಳ ಕೈವಾಡವೂ ಇದೆ. ತಾಲ್ಲೂಕು ಹಾಗೂ ಜಿಲ್ಲಾಡಳಿತ ನ್ಯಾಯ ಕೊಡಿಸಬೇಕು ಎಂದು ರೈತ ಸಂಘದ ಮುಖಂಡೆ ಅನಸೂಯಮ್ಮ ಒತ್ತಾಯಿಸಿದರು. <br><br>ರೈತ ಮಹಿಳೆ ಮಂಗಳವಾರಪೇಟೆ ರತ್ನಮ್ಮ, ರೈತಸಂಘದ ಮುಖಂಡರಾದ ಅಮ್ಮಳ್ಳಿದೊಡ್ಡಿ ರಾಮೇಗೌಡ, ಸಿಂಗರಾಜಿಪುರ ದೇವರಾಜು, ಮಂಗಳವಾರಪೇಟೆ ವಿಶ್ವ, ಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>