<p><strong>ರಾಮನಗರ</strong>: ‘ಜಿಲ್ಲೆಯಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಾವು-ನೋವು ಸಾಮಾನ್ಯವಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾನೆ ಹಾವಳಿ ತಡೆಯದಿದ್ದರೆ, ಅರಣ್ಯ ಸಚಿವರ ನಿವಾಸದ ಎದುರು ಹೋರಾಟ ನಡೆಸಲಾಗುವುದು’ ಎಂದು ರೈತ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ಎಚ್ಚರಿಕೆ ನೀಡಿದರು.</p>.<p>ನಗರದ ಎಪಿಎಂಸಿಯ ರೈತ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಒಂದೂವರೆ ದಶಕದಿಂದ ಆನೆಗಳ ಕಾಟ ಏರುಗತಿಯಲ್ಲೇ ಸಾಗುತ್ತಿದೆ. ಹಲವು ಜೀವಗಳು ಬಲಿಯಾಗಿವೆ. ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ಆದರೂ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಾಡಾನೆಗಳಿಂದಾಗಿ ರೈತರು ಬೆಳೆದ ಬೆಳೆ ಕೈ ಸೇರುತ್ತಿಲ್ಲ. ಜೀವಹಾನಿ ಮತ್ತು ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾದರೂ ಅನ್ನದಾತರಿಗೆ ಬಿಡಿಗಾಸಿನ ಪರಿಹಾರ ಮಾತ್ರ ಸಿಗುತ್ತಿದೆ. ಇದರಿಂದಾಗಿ ರೈತರು ಜಮೀನುಗಳನ್ನು ಪಾಳು ಬಿಡುತ್ತಿದ್ದಾರೆ. ಅರಣ್ಯ ಇಲಾಖೆಯ ಆನೆ ಕಾರ್ಯಾಚರಣೆಯು ಕಾಟಾಚಾರಕ್ಕೆ ನಡೆಯುತ್ತಿದೆ’ ಎಂದರು.</p>.<p>‘ನಾಡಿಗೆ ಬರುವ ಆನೆಗಳನ್ನು ನಿಯಂತ್ರಿಸಲು ಆನೆ ಕಾರ್ಯಪಡೆ ಇದ್ದರೂ, ಆನೆಗಳು ಬರುವುದು ತಪ್ಪಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆನೆಗಳನ್ನು ಹಿಡಿದು ಮರಳಿ ಕಾಡಿಗೆ ಬಿಟ್ಟರೂ ಮತ್ತೆ ಬರುತ್ತಿವೆ. ಇದರಿಂದಾಗಿ ಅರಣ್ಯದಂಚಿನ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಜೀವ ಕೈಯಲ್ಲಿಡಿದು ಬದುಕುತ್ತಿದ್ದಾರೆ. ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ರಾಮನಗರ ತಾಲ್ಲೂಕು ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಖಾತೆ ಮಾಡಿಕೊಡಲು ಅಧಿಕಾರಿಗಳು ಸಾವಿರಾರು ರೂಪಾಯಿ ಕೇಳುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ರೈತರ ಕೆಲಸಗಳು ಲಂಚವಿಲ್ಲದೆ ಆಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹಿಂದಿನ ಜಿಲ್ಲಾಧಿಕಾರಿಗಳು ರೈತರ ಸಭೆ ಕರೆದು, ಅವರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಇತ್ತೀಚೆಗೆ ರೈತರ ಸಮಸ್ಯೆಗಳನ್ನು ಕೇಳುವವರೇ ಇಲ್ಲವಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅನ್ನದಾತರ ಕಷ್ಟ–ಸುಖ ಕೇಳುತ್ತಿಲ್ಲ. ರೈತ ಸುಭಿಕ್ಷವಾಗಿದ್ದರೆ ಮಾತ್ರ ಈ ಜಗತ್ತು ಸುಭಿಕ್ಷವಾಗಿರುತ್ತದೆ ಎಂಬುದನ್ನು ಎಲ್ಲರೂ ಮರೆತಿದ್ದಾರೆ’ ಎಂದರು.</p>.<p>ಸಂಘದ ಮುಖಂಡರಾದ ರವಿಕುಮಾರ್, ಶಿವಣ್ಣ, ಲೋಕೇಶ್, ಅಮ್ಮಣ್ಣಮ್ಮ ಹಾಗೂ ಇತರರು ಇದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ</strong>: ‘ಜಿಲ್ಲೆಯಲ್ಲಿ ಕಾಡಾನೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸಾವು-ನೋವು ಸಾಮಾನ್ಯವಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಡಾನೆ ಹಾವಳಿ ತಡೆಯದಿದ್ದರೆ, ಅರಣ್ಯ ಸಚಿವರ ನಿವಾಸದ ಎದುರು ಹೋರಾಟ ನಡೆಸಲಾಗುವುದು’ ಎಂದು ರೈತ ಸಂಘದ ಅಧ್ಯಕ್ಷ ತುಂಬೇನಹಳ್ಳಿ ಶಿವಕುಮಾರ್ ಎಚ್ಚರಿಕೆ ನೀಡಿದರು.</p>.<p>ನಗರದ ಎಪಿಎಂಸಿಯ ರೈತ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರೈತ ದಿನಾಚರಣೆಯಲ್ಲಿ ಮಾತನಾಡಿದ ಅವರು, ‘ಒಂದೂವರೆ ದಶಕದಿಂದ ಆನೆಗಳ ಕಾಟ ಏರುಗತಿಯಲ್ಲೇ ಸಾಗುತ್ತಿದೆ. ಹಲವು ಜೀವಗಳು ಬಲಿಯಾಗಿವೆ. ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ಆದರೂ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಕಾಡಾನೆಗಳಿಂದಾಗಿ ರೈತರು ಬೆಳೆದ ಬೆಳೆ ಕೈ ಸೇರುತ್ತಿಲ್ಲ. ಜೀವಹಾನಿ ಮತ್ತು ಲಕ್ಷಾಂತರ ರೂಪಾಯಿ ಬೆಳೆ ಹಾನಿಯಾದರೂ ಅನ್ನದಾತರಿಗೆ ಬಿಡಿಗಾಸಿನ ಪರಿಹಾರ ಮಾತ್ರ ಸಿಗುತ್ತಿದೆ. ಇದರಿಂದಾಗಿ ರೈತರು ಜಮೀನುಗಳನ್ನು ಪಾಳು ಬಿಡುತ್ತಿದ್ದಾರೆ. ಅರಣ್ಯ ಇಲಾಖೆಯ ಆನೆ ಕಾರ್ಯಾಚರಣೆಯು ಕಾಟಾಚಾರಕ್ಕೆ ನಡೆಯುತ್ತಿದೆ’ ಎಂದರು.</p>.<p>‘ನಾಡಿಗೆ ಬರುವ ಆನೆಗಳನ್ನು ನಿಯಂತ್ರಿಸಲು ಆನೆ ಕಾರ್ಯಪಡೆ ಇದ್ದರೂ, ಆನೆಗಳು ಬರುವುದು ತಪ್ಪಿಲ್ಲ. ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆನೆಗಳನ್ನು ಹಿಡಿದು ಮರಳಿ ಕಾಡಿಗೆ ಬಿಟ್ಟರೂ ಮತ್ತೆ ಬರುತ್ತಿವೆ. ಇದರಿಂದಾಗಿ ಅರಣ್ಯದಂಚಿನ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಜೀವ ಕೈಯಲ್ಲಿಡಿದು ಬದುಕುತ್ತಿದ್ದಾರೆ. ಸರ್ಕಾರ ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.</p>.<p>ಸಂಘದ ರಾಮನಗರ ತಾಲ್ಲೂಕು ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ‘ಗ್ರಾಮ ಪಂಚಾಯಿತಿಗಳಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಖಾತೆ ಮಾಡಿಕೊಡಲು ಅಧಿಕಾರಿಗಳು ಸಾವಿರಾರು ರೂಪಾಯಿ ಕೇಳುತ್ತಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ರೈತರ ಕೆಲಸಗಳು ಲಂಚವಿಲ್ಲದೆ ಆಗುತ್ತಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಹಿಂದಿನ ಜಿಲ್ಲಾಧಿಕಾರಿಗಳು ರೈತರ ಸಭೆ ಕರೆದು, ಅವರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಇತ್ತೀಚೆಗೆ ರೈತರ ಸಮಸ್ಯೆಗಳನ್ನು ಕೇಳುವವರೇ ಇಲ್ಲವಾಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಅನ್ನದಾತರ ಕಷ್ಟ–ಸುಖ ಕೇಳುತ್ತಿಲ್ಲ. ರೈತ ಸುಭಿಕ್ಷವಾಗಿದ್ದರೆ ಮಾತ್ರ ಈ ಜಗತ್ತು ಸುಭಿಕ್ಷವಾಗಿರುತ್ತದೆ ಎಂಬುದನ್ನು ಎಲ್ಲರೂ ಮರೆತಿದ್ದಾರೆ’ ಎಂದರು.</p>.<p>ಸಂಘದ ಮುಖಂಡರಾದ ರವಿಕುಮಾರ್, ಶಿವಣ್ಣ, ಲೋಕೇಶ್, ಅಮ್ಮಣ್ಣಮ್ಮ ಹಾಗೂ ಇತರರು ಇದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>