<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಗುಡಿಸರಗೂರು ಗ್ರಾಮದ ಬಸವೇಶ್ವರ ಕೊಂಡ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಬೆಳಗಿನ ಜಾವ ಕಳಶ ಹೊತ್ತ ಅರ್ಚಕರು ಕೊಂಡ ಪ್ರವೇಶಿಸುತ್ತಿದ್ದಂತೆಯೆ ಜಯಘೋಷ ಮೊಳಗಿದವು. ಕಳಶ ಹೊತ್ತ ಅರ್ಚಕರು ಬರಿಗಾಲಲ್ಲಿ ಕೆಂಡದ ಮೇಲೆ ನಡೆದರು. ಸುತ್ತಮುತ್ತಲ ಹಳ್ಳಿಗಳ ಹತ್ತು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.</p>.<p>ಕೊಂಡದ ಅಂಗವಾಗಿ ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆದವು. ಸೋಮವಾರ ಸಂಜೆ ಕೊಂಡಕ್ಕೆ ಹಾಕಿದ ಸೌದೆಗೆ ಬೆಂಕಿ ಹಚ್ಚಿ ಮಂಗಳವಾರ ಬೆಳಿಗ್ಗೆ ಕೊಂಡ ಹಾಯಲಾಗುತ್ತದೆ.</p>.<p>ಕೊಂಡಕ್ಕೆ ತಾಲ್ಲೂಕಿನಲ್ಲಷ್ಟೇ ಅಲ್ಲದೆ ನೆರೆಯ ಜಿಲ್ಲೆಯ ಜನರು ಸೌದೆ ಕಾಣಿಕೆ ಕೊಡುವುದು ವಾಡಿಕೆ. ಭಾನುವಾರದಿಂದಲೇ ಭಕ್ತರು ಸೌದೆ ತಂದರು. 20 ಅಡಿ ಎತ್ತರಕ್ಕೆ ಸೌದೆ ಹಾಕಲಾಗಿತ್ತು.<br><br> ಜನರು ತಮ್ಮ ರಾಸುಗಳ ಒಳತಿಗಾಗಿ ಹರಕೆ ಹೊರುವುದು ಇಲ್ಲಿಯ ಮತ್ತೊಂದು ವಿಶೇಷ. ರಾಸುಗಳಿಗೆ ಕೆಡಕು ಉಂಟಾದಾಗ ಬಸವೇಶ್ವರನನ್ನು ನೆನೆದು ಕೊಂಡಕ್ಕೆ ಹರಳು, ಸೌದೆ ಹಾಕುತ್ತೇನೆ ಎಂದು ಹರಕೆ ಹೊರುತ್ತಾರೆ. ರಾಸುಗಳು ಗುಣಮುಖವಾದ ನಂತರ ಉತ್ಸವದ ದಿನ ಇಲ್ಲಿಗೆ ಬಂದು ಹರಕೆ ತೀರಿಸುತ್ತಾರೆ. </p>.<p>ಸೋಮವಾರ ದಿನಪೂರ್ತಿ ವಿವಿಧ ಗ್ರಾಮಗಳಿಂದ ಬಂದ ಜಾನಪದ ಕಲಾವಿದರಿಂದ ಕೋಲಾಟ, ಕೀಲು ಕುದುರೆ, ತಮಟೆ ಕುಣಿತ, ಒನಕೆ ಕುಣಿತ ನಡೆದವು.</p>.<p>ಮಂಗಳವಾರ ಹರಕೆ ಹೊತ್ತ ಭಕ್ತಾದಿಗಳಿಗೆ ಬಾಯಿಬೀಗ ಹಾಕುವುದು, ಪಾನಕದ ಬಂಡಿ ಉತ್ಸವ, ರಥೋತ್ಸವ, ಜಾತ್ರಾ ಮಹೋತ್ಸವ, ಸಂಜೆ ಚಿಕ್ಕಬೋರೇಗೌಡನದೊಡ್ಡಿ ಗ್ರಾಮಸ್ಥರಿಂದ ತೆಪ್ಪೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong>: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಗುಡಿಸರಗೂರು ಗ್ರಾಮದ ಬಸವೇಶ್ವರ ಕೊಂಡ ಮಹೋತ್ಸವ ಮಂಗಳವಾರ ವಿಜೃಂಭಣೆಯಿಂದ ನೆರವೇರಿತು.</p>.<p>ಬೆಳಗಿನ ಜಾವ ಕಳಶ ಹೊತ್ತ ಅರ್ಚಕರು ಕೊಂಡ ಪ್ರವೇಶಿಸುತ್ತಿದ್ದಂತೆಯೆ ಜಯಘೋಷ ಮೊಳಗಿದವು. ಕಳಶ ಹೊತ್ತ ಅರ್ಚಕರು ಬರಿಗಾಲಲ್ಲಿ ಕೆಂಡದ ಮೇಲೆ ನಡೆದರು. ಸುತ್ತಮುತ್ತಲ ಹಳ್ಳಿಗಳ ಹತ್ತು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು.</p>.<p>ಕೊಂಡದ ಅಂಗವಾಗಿ ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯದಲ್ಲಿ ವಿಶೇಷ ಪೂಜೆ ನಡೆದವು. ಸೋಮವಾರ ಸಂಜೆ ಕೊಂಡಕ್ಕೆ ಹಾಕಿದ ಸೌದೆಗೆ ಬೆಂಕಿ ಹಚ್ಚಿ ಮಂಗಳವಾರ ಬೆಳಿಗ್ಗೆ ಕೊಂಡ ಹಾಯಲಾಗುತ್ತದೆ.</p>.<p>ಕೊಂಡಕ್ಕೆ ತಾಲ್ಲೂಕಿನಲ್ಲಷ್ಟೇ ಅಲ್ಲದೆ ನೆರೆಯ ಜಿಲ್ಲೆಯ ಜನರು ಸೌದೆ ಕಾಣಿಕೆ ಕೊಡುವುದು ವಾಡಿಕೆ. ಭಾನುವಾರದಿಂದಲೇ ಭಕ್ತರು ಸೌದೆ ತಂದರು. 20 ಅಡಿ ಎತ್ತರಕ್ಕೆ ಸೌದೆ ಹಾಕಲಾಗಿತ್ತು.<br><br> ಜನರು ತಮ್ಮ ರಾಸುಗಳ ಒಳತಿಗಾಗಿ ಹರಕೆ ಹೊರುವುದು ಇಲ್ಲಿಯ ಮತ್ತೊಂದು ವಿಶೇಷ. ರಾಸುಗಳಿಗೆ ಕೆಡಕು ಉಂಟಾದಾಗ ಬಸವೇಶ್ವರನನ್ನು ನೆನೆದು ಕೊಂಡಕ್ಕೆ ಹರಳು, ಸೌದೆ ಹಾಕುತ್ತೇನೆ ಎಂದು ಹರಕೆ ಹೊರುತ್ತಾರೆ. ರಾಸುಗಳು ಗುಣಮುಖವಾದ ನಂತರ ಉತ್ಸವದ ದಿನ ಇಲ್ಲಿಗೆ ಬಂದು ಹರಕೆ ತೀರಿಸುತ್ತಾರೆ. </p>.<p>ಸೋಮವಾರ ದಿನಪೂರ್ತಿ ವಿವಿಧ ಗ್ರಾಮಗಳಿಂದ ಬಂದ ಜಾನಪದ ಕಲಾವಿದರಿಂದ ಕೋಲಾಟ, ಕೀಲು ಕುದುರೆ, ತಮಟೆ ಕುಣಿತ, ಒನಕೆ ಕುಣಿತ ನಡೆದವು.</p>.<p>ಮಂಗಳವಾರ ಹರಕೆ ಹೊತ್ತ ಭಕ್ತಾದಿಗಳಿಗೆ ಬಾಯಿಬೀಗ ಹಾಕುವುದು, ಪಾನಕದ ಬಂಡಿ ಉತ್ಸವ, ರಥೋತ್ಸವ, ಜಾತ್ರಾ ಮಹೋತ್ಸವ, ಸಂಜೆ ಚಿಕ್ಕಬೋರೇಗೌಡನದೊಡ್ಡಿ ಗ್ರಾಮಸ್ಥರಿಂದ ತೆಪ್ಪೋತ್ಸವ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>