ಕನಕಪುರ: ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶನಿವಾರ ನಿಜ ಶರಣ ಅಂಬಿಗರ ಚೌಡಯ್ಯ ಅವರ 903ನೇ ಜಯಂತಿ ಕಾರ್ಯಕ್ರಮ ನಡೆಯಿತು.
ಗ್ರೇಡ್-2 ತಹಶೀಲ್ದಾರ್ ಮಾತನಾಡಿ, ‘ಅಂಬಿಗರ ಚೌಡಯ್ಯನವರು 9ನೇ ಶತಮಾನದಲ್ಲಿ ಸಮಾಜದ ಅಭಿವೃದ್ಧಿ ಮತ್ತು ಪ್ರಗತಿಗೆ ಶ್ರವಿಸಿದ್ದಾರೆ. ಸಮಾಜದಲ್ಲಿ ಇದ್ದಂತಹ ಮೂಢ ನಂಬಿಕೆಯನ್ನು ತೊಡೆದು ಹಾಕಿ ಸಮಾಜದಲ್ಲಿ ಸಮಾನತೆ ಮೂಡುವ ಕೆಲಸ ಮಾಡಿದ್ದಾರೆ’ ಎಂದು ತಿಳಿಸಿದರು.
ಅಂಬಿಗರ ಚೌಡಯ್ಯ ಅವರು ಎಲ್ಲ ಸಮಾಜದವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ಮಾಡಿದ್ದು, ಅವರ ವಿಚಾರಧಾರೆಗಳು ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿವೆ. ಅವರ ಆಚಾರ ವಿಚಾರಗಳನ್ನು ನಾವು ಪಾಲಿಸಬೇಕು ಎಂದು ಹೇಳಿದರು.
ಜಯಂತಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ನಾಗರಿಕರು, ಪಾಲ್ಗೊಂಡು ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ತೋಟಗಾರಿಕೆ ಇಲಾಖೆ ಶ್ರೀನಿವಾಸ್, ಆಹಾರ ಇಲಾಖೆ ಪ್ರಕಾಶ್, ಆರ್.ಐ. ಶಿವರುದ್ರಯ್ಯ, ಕುರುಬ ಸಂಘದ ಚಂದ್ರು, ಗಂಗಮತಸ್ಥರ ಗಿರೀಶ್, ಜಿಲ್ಲಾ ಲೇಖಕರ ವೇದಿಕೆ ಅಧ್ಯಕ್ಷ ಕೂಗಿ ಗಿರಿಯಪ್ಪ, ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಗಬ್ಬಾಡಿ ಕಾಡೆಗೌಡ ಸೇರಿದಂತೆ ಅನೇಕರು ಉಪಸ್ಥಿತರಿದ್ದರು