‘ಅಮಾನತುಗೊಂಡಿದ್ದ ಜವಾನ ಮತ್ತು ಆತನ ಅಕ್ಕ ಗೌರಮ್ಮ, ತಮ್ಮ ಗೋಪಿ ಇತರರು ಸಭೆಗೆ ನುಗ್ಗಿ ಬಂದರು. ಜಗಳ ತೆಗೆದು ಸಭೆಗೆ ಅಡ್ಡಿಪಡಿಸಿ, ನನ್ನ ಮೇಲೆ ಹಲ್ಲೆ ನಡೆಸಿದರು. ಗೌರಮ್ಮ ಎಂಬಾಕೆ ನನ್ನ ಬಲಕೈಗೆ ಕಚ್ಚಿ ಗಾಯಗೊಳಿಸಿದರು. ಬಿಡಿಸಲು ಬಂದ ನನ್ನ ಪತಿ ಭೈರಪ್ಪ ಅವರ ಮೇಲೂ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಅಧ್ಯಕ್ಷೆ ಇಂದ್ರಮ್ಮ ಶಿವಗಂಗಯ್ಯ, ಸದಸ್ಯರಾದ ಗೋಮತಿ ಹಾಗೂ ನನ್ನನ್ನು ಕಚೇರಿಯ ಒಳಗೆ ಕೂಡಿಹಾಕಿ ಬೀಗ ಹಾಕಿದರು. ನಂತರ ಪೊಲೀಸರು ಬಂದು ನಮ್ಮನ್ನು ಬಿಡಿಸಿದರು’ ಎಂದು ಯಶೋಧಮ್ಮ ಭೈರಪ್ಪ ಆರೋಪಿಸಿದ್ದಾರೆ.