ಬೆಂಗಳೂರಿನಿಂದ ಮಾಗಡಿ ಮಾರ್ಗವಾಗಿ ಹುಲಿಯೂರು ದುರ್ಗಕ್ಕೆ ಹೋಗುತ್ತಿದ್ದ ಭವಾನಿ ಬಸ್, ಒಳಗೆ ಮತ್ತು ಟಾಪ್ನಲ್ಲಿ ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಂಡು ಚಲಿಸುತ್ತಿತ್ತು. ಗಮನಿಸಿದ ಸಬ್ ಇನ್ಸ್ಪೆಕ್ಟರ್ ಟಿ.ವೆಂಕಟೇಶ್ ಮತ್ತು ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಬಂದ ಕೂಡಲೇ ಚಾಲಕನನ್ನು ವಶಕ್ಕೆ ಪಡೆದರು. ಪ್ರಕರಣ ದಾಖಲಿಸಿ, ₹3 ಸಾವಿರ ದಂಡ ವಿಧಿಸಿದರು.