ರಾಮನಗರ: ಮೇಕೆದಾಟು ಪಾದಯಾತ್ರೆಯ ಮೂರನೇ ದಿನವಾದ ಸೋಮವಾರ ನೀರಿಗಾಗಿ ನಡಿಗೆಯ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ 64 ನಾಯಕರ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ, ಡಿ.ಕೆ. ಸುರೇಶ್, ಎಸ್. ರವಿ, ಧ್ರುವನಾರಾಯಣ ಜೊತೆಗೆ ಮೈಸೂರು ಭಾಗದ ನಾಯಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು ಮೊದಲಾದ ಮುಖಂಡರ ಮೇಲೂ ಪೊಲೀಸರು ಎಫ್ ಐಆರ್ ದಾಖಲು ಮಾಡಿದ್ದಾರೆ.
ಮಾಜಿ ಸಚಿವ ಎಚ್.ಸಿ. ಮಹದೇವಪ್ಪ, ಶಾಸಕರಾದ ಯತೀಂದ್ರ ಸಿದ್ದರಾಮಯ್ಯ, ಮಂಜುನಾಥ್ ಮೊದಲಾದವರ ಹೆಸರೂ ಎಫ್ ಐಆರ್ ನಲ್ಲಿದೆ.