<p>ಮಾಗಡಿ: ಪುರಸಭೆ ತ್ಯಾಜ್ಯ ಘಟಕದಲ್ಲಿ ಕಸಕ್ಕೆ ಬೆಂಕಿ ಹಚ್ಚುವುದರಿಂದ ನಿವಾಸಿಗಳಿಗೆ ಸಾಕಷ್ಟು ತೊಂದರೆ ಎದುರಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಕಲ್ಪನಾ ಶಿವಣ್ಣ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಿರುಮಲೆ ರಂಗನಾಥಸ್ವಾಮಿ ದೇವಸ್ಥಾನ ಆವರಣದಲ್ಲಿ ಭಾನುವಾರ ನಿಸರ್ಗ ಪರಿಚರಣ ಟ್ರಸ್ಟ್ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜನರು ಜಾಗೃತರಾಗದಿದ್ದರೆ ಮುಂದಿನ ಪೀಳಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದರು.</p>.<p>ನಿಸರ್ಗ ಪರಿಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್.ಶಿವಲಿಂಗಯ್ಯ ಮಾತನಾಡಿ, ಕಾನೂನು ಪ್ರಕಾರ ತ್ಯಾಜ್ಯ ಘಟಕಗಳು ಕನಿಷ್ಠ ಮೂರು ಕಿ.ಮೀ ದೂರದಲ್ಲಿರಬೇಕು. ಆದರೆ, ಪುರಸಭೆ ರಂಗನಾಥಸ್ವಾಮಿ ದೇವಸ್ಥಾನದಿಂದ ಕೇವಲ 250 ಮೀಟರ್ ಅಂತರದಲ್ಲಿ ಸ್ಥಾಪಿಸಿದೆ. ಇದು ಕಾನೂನು ಬಾಹಿರವಾಗಿದೆ ಎಂದರು.</p>.<p>ಇದೇ ವೇಳೆ ರೈತ ರೇಣುಕಪ್ಪ, ಮುನಿರಾಜು, ತಿರುಮಲೆ ಶ್ರೀನಿವಾಸ್, ಗಿರೀಶ್, ಹನುಮಂತಯ್ಯ, ಗಂಗಣ್ಣ, ಗಂಗನರಸಿಂಹಯ್ಯ, ಬಸವರಾಜು, ರಂಗೇಗೌಡ, ವೆಂಕಟಸ್ವಾಮಿ, ಶಶಿಧರ್, ಶೇಷಾದ್ರಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಗಡಿ: ಪುರಸಭೆ ತ್ಯಾಜ್ಯ ಘಟಕದಲ್ಲಿ ಕಸಕ್ಕೆ ಬೆಂಕಿ ಹಚ್ಚುವುದರಿಂದ ನಿವಾಸಿಗಳಿಗೆ ಸಾಕಷ್ಟು ತೊಂದರೆ ಎದುರಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷೆ ಕಲ್ಪನಾ ಶಿವಣ್ಣ ಬೇಸರ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಿರುಮಲೆ ರಂಗನಾಥಸ್ವಾಮಿ ದೇವಸ್ಥಾನ ಆವರಣದಲ್ಲಿ ಭಾನುವಾರ ನಿಸರ್ಗ ಪರಿಚರಣ ಟ್ರಸ್ಟ್ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಜನರು ಜಾಗೃತರಾಗದಿದ್ದರೆ ಮುಂದಿನ ಪೀಳಿಗೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದರು.</p>.<p>ನಿಸರ್ಗ ಪರಿಚರಣ ಟ್ರಸ್ಟ್ ಅಧ್ಯಕ್ಷ ಎಚ್.ಎನ್.ಶಿವಲಿಂಗಯ್ಯ ಮಾತನಾಡಿ, ಕಾನೂನು ಪ್ರಕಾರ ತ್ಯಾಜ್ಯ ಘಟಕಗಳು ಕನಿಷ್ಠ ಮೂರು ಕಿ.ಮೀ ದೂರದಲ್ಲಿರಬೇಕು. ಆದರೆ, ಪುರಸಭೆ ರಂಗನಾಥಸ್ವಾಮಿ ದೇವಸ್ಥಾನದಿಂದ ಕೇವಲ 250 ಮೀಟರ್ ಅಂತರದಲ್ಲಿ ಸ್ಥಾಪಿಸಿದೆ. ಇದು ಕಾನೂನು ಬಾಹಿರವಾಗಿದೆ ಎಂದರು.</p>.<p>ಇದೇ ವೇಳೆ ರೈತ ರೇಣುಕಪ್ಪ, ಮುನಿರಾಜು, ತಿರುಮಲೆ ಶ್ರೀನಿವಾಸ್, ಗಿರೀಶ್, ಹನುಮಂತಯ್ಯ, ಗಂಗಣ್ಣ, ಗಂಗನರಸಿಂಹಯ್ಯ, ಬಸವರಾಜು, ರಂಗೇಗೌಡ, ವೆಂಕಟಸ್ವಾಮಿ, ಶಶಿಧರ್, ಶೇಷಾದ್ರಿ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>