<p><strong>ಚನ್ನಪಟ್ಟಣ</strong> (ರಾಮನಗರ): ಮೈಸೂರು- ಉದಯಪುರ ನಡುವೆ ಸಂಚರಿಸುವ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನ ಎಂಜಿನ್ನಲ್ಲಿ ಗುರುವಾರ ಬೆಳಿಗ್ಗೆ ತಾಲ್ಲೂಕಿನ ವಂದಾರಗುಪ್ಪೆ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿತು.</p>.<p>ಬೆಂಕಿ ಗಮನಿಸಿದ ಗೇಟ್ಮ್ಯಾನ್ ಕೆಂಪು ಬಾವುಟ ಪ್ರದರ್ಶಿಸಿದ್ದರಿಂದ ಲೋಕೊ ಪೈಲಟ್ ತುರ್ತು ಬ್ರೇಕ್ ಹಾಕಿ ರೈಲು ನಿಲ್ಲಿಸಿದರು. ಕೂಗಳತೆ ದೂರದಲ್ಲಿದ್ದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. </p>.<p>ಎಂಜಿನ್ನಲ್ಲಿ ಬೆಂಕಿ ಕಂಡ ಸಾರ್ವಜನಿಕರು ರೈಲು ನಿಲ್ಲಿಸುವಂತೆ ಜೋರಾಗಿ ಕೂಗಿಕೊಂಡರು. ಇದನ್ನು ಗಮನಿಸದ ಲೋಕೊಪೈಲಟ್ ಮುಂದೆ ಗೇಟ್ಮ್ಯಾನ್ ತೋರಿದ ಕೆಂಪು ಬಾವುಟ ಕಂಡು ರೈಲು ನಿಲ್ಲಿಸಿದ. ಆ ಹೊತ್ತಿಗಾಗಲೇ ಜನರು ಓಡಿ ಹೋಗಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು.</p>.<p>ಎಂಜಿನ್ನಲ್ಲಿ ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯನ್ನು ಬೇಗ ನಂದಿಸದಿದ್ದರೆ ಬೋಗಿಗಳಿಗೂ ವ್ಯಾಪಿಸುವ ಸಾಧ್ಯತೆ ಇತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ</strong> (ರಾಮನಗರ): ಮೈಸೂರು- ಉದಯಪುರ ನಡುವೆ ಸಂಚರಿಸುವ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನ ಎಂಜಿನ್ನಲ್ಲಿ ಗುರುವಾರ ಬೆಳಿಗ್ಗೆ ತಾಲ್ಲೂಕಿನ ವಂದಾರಗುಪ್ಪೆ ಗೇಟ್ ಬಳಿ ಬೆಂಕಿ ಕಾಣಿಸಿಕೊಂಡಿತು.</p>.<p>ಬೆಂಕಿ ಗಮನಿಸಿದ ಗೇಟ್ಮ್ಯಾನ್ ಕೆಂಪು ಬಾವುಟ ಪ್ರದರ್ಶಿಸಿದ್ದರಿಂದ ಲೋಕೊ ಪೈಲಟ್ ತುರ್ತು ಬ್ರೇಕ್ ಹಾಕಿ ರೈಲು ನಿಲ್ಲಿಸಿದರು. ಕೂಗಳತೆ ದೂರದಲ್ಲಿದ್ದ ಅಗ್ನಿಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಘಟನೆಯಲ್ಲಿ ಯಾರಿಗೂ ತೊಂದರೆಯಾಗಿಲ್ಲ. </p>.<p>ಎಂಜಿನ್ನಲ್ಲಿ ಬೆಂಕಿ ಕಂಡ ಸಾರ್ವಜನಿಕರು ರೈಲು ನಿಲ್ಲಿಸುವಂತೆ ಜೋರಾಗಿ ಕೂಗಿಕೊಂಡರು. ಇದನ್ನು ಗಮನಿಸದ ಲೋಕೊಪೈಲಟ್ ಮುಂದೆ ಗೇಟ್ಮ್ಯಾನ್ ತೋರಿದ ಕೆಂಪು ಬಾವುಟ ಕಂಡು ರೈಲು ನಿಲ್ಲಿಸಿದ. ಆ ಹೊತ್ತಿಗಾಗಲೇ ಜನರು ಓಡಿ ಹೋಗಿ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದರು.</p>.<p>ಎಂಜಿನ್ನಲ್ಲಿ ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಬೆಂಕಿಯನ್ನು ಬೇಗ ನಂದಿಸದಿದ್ದರೆ ಬೋಗಿಗಳಿಗೂ ವ್ಯಾಪಿಸುವ ಸಾಧ್ಯತೆ ಇತ್ತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>