ರಾಮನಗರ: ತಾಲ್ಲೂಕಿನ ಬಾಳಕುಳಿದೊಡ್ಡಿ ಗ್ರಾಮದ ಬಿ.ಎಚ್. ರಾಜಣ್ಣ ಎಂಬುವರ ಮನೆಯಲ್ಲಿ ಶನಿವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡಿದ್ದು ಮನೆಗೆ ಹಾನಿಯಾಗಿದೆ.
ಬೆಳಗ್ಗೆ ಹಾಲು ಕಾಯಿಸುವ ಸಮಯದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತು. ಮನೆಯಲ್ಲಿದ್ದ ನಾಲ್ವರು ಹೊರಗೆ ಓಡಿದ್ದು, ಯಾವುದೇ ತೊಂದರೆಯಾಗಿಲ್ಲ. ಗೃಹೋಪಯೋಗಿ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.