ಫಾರಂ ಒಳಗೆ ಕೆಲವು ಒಣಗಿದ ಮರಗಳು ನೆಲಕ್ಕೆ ಬಿದ್ದಿದ್ದವು. ಈ ಮರಗಳು, ಬಿದಿರುಮೆಳೆ, ಬೂರುಗರ ಮರಗಳು ಸುಟ್ಟು ಭಸ್ಮವಾಗಿವೆ. ಇಷ್ಟೆಲ್ಲ ಅನಾಹುತ ನಡೆದರೂ ರೇಷ್ಮೆ ಇಲಾಖೆಯ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡು ಉರಿಯುತ್ತಿದ್ದ ಕಡೆ ಬರಲೇ ಇಲ್ಲ. ನಟರಾಜ ಬಡಾವಣೆಯ ನಿವಾಸಿಗಳು ಬೆಂಕಿ ನಂದಿಸಿದ ಅಗ್ನಿಶಾಮಕ ಅಧಿಕಾರಿಗಳನ್ನು ಅಭಿನಂದಿಸಿದರು. ಬೇಸಿಗೆಯಲ್ಲಿ ಬೆಂಕಿ ಹಚ್ಚುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಬೇಕು ಎಂದು ನಿವಾಸಿಗಳು ಮನವಿ ಮಾಡಿದರು.