ರಾಮನಗರ: ಬೀದರ್ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ 13ನೇ ಘಟಿಕೋತ್ಸವದಲ್ಲಿ, ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಬಿ.ಎಫ್.ಎಸ್ಸಿ ಪದವಿಯಲ್ಲಿ 2021–22ನೇ ಸಾಲಿನಲ್ಲಿ ಪ್ರಥಮ ರ್ಯಾಂಕ್ ಪಡೆದಿರುವ ರಾಮನಗರದ ಹೇಮಶ್ರೀ ಗೌಡ ಅವರು 3 ಚಿನ್ನದ ಪದಕಗಳನ್ನು ತಮ್ಮ ಕೊರಳಿಗೇರಿಸಿಕೊಂಡಿದ್ದಾರೆ.