ಕೆಲವು ದಿನಗಳ ಹಿಂದೆ ಚನ್ನಪಟ್ಟಣ ತಾಲ್ಲೂಕಿನ ಶ್ಯಾನುಬೋಗನಹಳ್ಳಿಯಲ್ಲಿ ರಾಮನಗರದ ಜೈಲು ಸಿಬ್ಬಂದಿಯೊಬ್ಬರಿಗೆ ಸೋಂಕು ಧೃಡಪಟ್ಟಿತ್ತು. ಇತನ ಕುಟುಂಬ ಸದಸ್ಯರು ಹಾಗೂ ಗೆಳೆಯರೂ ಸೇರಿದಂತೆ ಒಟ್ಟು 24 ಮಂದಿಯನ್ನು ಕ್ವಾರಂಟೈನ್ ಮಾಡಿದ್ದರು. ಈ ಪೈಕಿ 24, 26 ಹಾಗೂ 27 ವರ್ಷದ ಯುವಕರಲ್ಲಿ ಸೋಂಕು ಇರುವುದು ಖಾತ್ರಿಯಾಗಿದೆ. ಈ ಮೂವರನ್ನೂ ಸದ್ಯ ರಾಮನಗರದ ಕಂದಾಯ ಭವನದಲ್ಲಿ ಇರುವ ಕೋವಿಡ್-19 ರೆಫರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಕ್ವಾರಂಟೈನ್ನಲ್ಲಿ ಮುಂದುವರಿಸಿದ್ದು, ಮತ್ತೊಮ್ಮೆ ಗಂಟಲ ದ್ರವ ಪಡೆದು ಪರೀಕ್ಷೆಗೆ ಕಳುಹಿಸಲಾಗಿದೆ.