ಜೆಡಿಎಸ್ ಜಿಲ್ಲಾ ಪದವೀಧರ ಘಟಕದ ಅಧ್ಯಕ್ಷ ಜಿ.ಟಿ. ಕೃಷ್ಣ ಕಲಾ ಜಾಥಾಕ್ಕೆ ಚಾಲನೆ ನೀಡಿದರು. ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಕೆಂಪರಾಜು, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಾಂತರಾಜ್, ಪತ್ರಕರ್ತೆ ಸುಧಾರಾಣಿ, ಹಾಡುಗಾರ್ತಿ ಮಂಡ್ಯ ಮೀನಾಕ್ಷಿ, ಡಿ.ಎಸ್.ಎಸ್. ಬೆಂಗಳೂರು ವಿಭಾಗದ ಪ್ರಧಾನ ಸಂಚಾಲಕ ಸೋಮಶೇಖರ್, ತತ್ವಪದ ಕಲಾವಿದರಾದ ಗಿರಿಜಮ್ಮ ರಾಚಯ್ಯ, ಸಂಕಲಗೆರೆ ಕೃಷ್ಣ ಭಾಗವಹಿಸಿದ್ದರು. ಇದೇ ಸಂದರ್ಭ ಸಾಹಿತ್ಯ ಗೋಷ್ಠಿ ಹಾಗೂ ಕನ್ನಡ ನಾಡು, ನುಡಿ ಗೀತೆಗಳ ಗಾಯನ ನಡೆಯಿತು.