‘ಚನ್ನಪಟ್ಟಣದ ವಧು ಹಾಗೂ ಮಾಗಡಿಯ ವರನ ಮದುವೆ ಕಾರ್ಯಕ್ರಮದಲ್ಲಿ ಮಧ್ಯಾಹ್ನ ಊಟ ಮಾಡಿ, ಐಸ್ ಕ್ರೀಂ ಸೇವಿಸಿದವರಲ್ಲಿ ಸಂಜೆ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಈ ಪೈಕಿ ಚನ್ನಪಟ್ಟಣದ ಸರ್ಕಾರಿ ಆಸ್ಪತ್ರೆಗೆ 60 ಮಂದಿ, ಮಾಗಡಿ ಆಸ್ಪತ್ರೆಗೆ 50 ಹಾಗೂ ರಾಮನಗರ ಜಿಲ್ಲಾಸ್ಪತ್ರೆಗೆ 35 ಮಂದಿ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಎಲ್ಲರೂ ಗುಣಮುಖರಾಗಿದ್ದಾರೆ. ಆಹಾರ ಮತ್ತು ಐಸ್ ಕ್ರೀಂ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿಕೊಡಲಾಗಿದೆ. ವರದಿ ಬಂದ ಬಳಿಕ ಅಸ್ವಸ್ಥತೆಗೆ ಕಾರಣ ಗೊತ್ತಾಗಲಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಿರಂಜನ್ ‘ಪ್ರಜಾವಾಣಿ’ಗೆ ತಿಳಿಸಿದರು.