ರಾಮನಗರ ವಿಧಾನಸಭಾ ಕ್ಷೇತ್ರದಾದ್ಯಂತ ಅಗತ್ಯ ಇರುವವರಿಗೆ ಬೆಳಗ್ಗಿನ ಉಪಾಹಾರ ಹಾಗೂ ಮಧ್ಯಾಹ್ನ, ರಾತ್ರಿಯ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದೇ ತಿಂಗಳ ಆರಂಭದಿಂದಲೇ ಈ ಕಾರ್ಯಕ್ರಮ ಜಾರಿಯಲ್ಲಿದ್ದು, ಲಾಕ್ಡೌನ್ ಮುಗಿಯುವ ತನಕ ಈ ಯೋಜನೆ ಮುಂದುವರಿಯಲಿದೆ. ರಾಮನಗರದ ನಗರ ಪ್ರದೇಶ, ಕೈಲಾಂಚ, ಕಸಬಾ ಹೋಬಳಿ ಹಾಗೂ ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯಲ್ಲಿ ಊಟ ವಿತರಣೆ ನಡೆಸಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ 2,500 ಮಂದಿಗೆ ಊಟೋಪಚಾರ, ರಾತ್ರಿ ಊಟಕ್ಕೆ 2 ಸಾವಿರ ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.