<p><strong>ರಾಮನಗರ:</strong> ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ನಿರ್ಗತಿಕರು ಹಾಗೂ ನಿರಾಶ್ರಿತರ ಅನುಕೂಲಕ್ಕಾಗಿ ಶಾಸಕ ಎಚ್.ಡಿ. ಕುಮಾರಸ್ವಾಮಿ ‘ಜನತಾ ದಾಸೋಹ’ ಕಾರ್ಯಕ್ರಮ ಆರಂಭಿಸಿದ್ದು, ಜಿಲ್ಲೆಯಲ್ಲಿ ನಿತ್ಯ ಸುಮಾರು ಐದು ಸಾವಿರ ಮಂದಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.</p>.<p>ರಾಮನಗರ ವಿಧಾನಸಭಾ ಕ್ಷೇತ್ರದಾದ್ಯಂತ ಅಗತ್ಯ ಇರುವವರಿಗೆ ಬೆಳಗ್ಗಿನ ಉಪಾಹಾರ ಹಾಗೂ ಮಧ್ಯಾಹ್ನ, ರಾತ್ರಿಯ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದೇ ತಿಂಗಳ ಆರಂಭದಿಂದಲೇ ಈ ಕಾರ್ಯಕ್ರಮ ಜಾರಿಯಲ್ಲಿದ್ದು, ಲಾಕ್ಡೌನ್ ಮುಗಿಯುವ ತನಕ ಈ ಯೋಜನೆ ಮುಂದುವರಿಯಲಿದೆ. ರಾಮನಗರದ ನಗರ ಪ್ರದೇಶ, ಕೈಲಾಂಚ, ಕಸಬಾ ಹೋಬಳಿ ಹಾಗೂ ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯಲ್ಲಿ ಊಟ ವಿತರಣೆ ನಡೆಸಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ 2,500 ಮಂದಿಗೆ ಊಟೋಪಚಾರ, ರಾತ್ರಿ ಊಟಕ್ಕೆ 2 ಸಾವಿರ ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.</p>.<p>‘ಕುಮಾರಸ್ವಾಮಿ ಅವರ ಆಶಯದಂತೆ ಇದೇ ತಿಂಗಳ ೧ರಿಂದಲೇ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಲಾಕ್ಡೌನ್ ಪರಿಸ್ಥಿತಿ ಮುಗಿಯುವವರೆಗೂ ಈ ದಾಸೋಹ ನಿರಂತರವಾಗಿರಲಿದೆ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ತಿಳಿಸಿದರು.</p>.<p><strong>ಮಾಸ್ಕ್ ವಿತರಣೆಗೆ ಚಾಲನೆ:</strong> ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಅವರಿಂದ ಜನರಿಗೆ 1 ಲಕ್ಷ ಮಾಸ್ಕ್ ವಿತರಿಸಲಾಗುತ್ತಿದ್ದು, ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಈ ಸಂದರ್ಭ ಜೆಡಿಎಸ್ ಪದಾಕಾರಿಗಳಾದ ಪ್ರಕಾಶ್, ಉಮೇಶ್, ಗೂಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ನಿರ್ಗತಿಕರು ಹಾಗೂ ನಿರಾಶ್ರಿತರ ಅನುಕೂಲಕ್ಕಾಗಿ ಶಾಸಕ ಎಚ್.ಡಿ. ಕುಮಾರಸ್ವಾಮಿ ‘ಜನತಾ ದಾಸೋಹ’ ಕಾರ್ಯಕ್ರಮ ಆರಂಭಿಸಿದ್ದು, ಜಿಲ್ಲೆಯಲ್ಲಿ ನಿತ್ಯ ಸುಮಾರು ಐದು ಸಾವಿರ ಮಂದಿಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ.</p>.<p>ರಾಮನಗರ ವಿಧಾನಸಭಾ ಕ್ಷೇತ್ರದಾದ್ಯಂತ ಅಗತ್ಯ ಇರುವವರಿಗೆ ಬೆಳಗ್ಗಿನ ಉಪಾಹಾರ ಹಾಗೂ ಮಧ್ಯಾಹ್ನ, ರಾತ್ರಿಯ ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ಇದೇ ತಿಂಗಳ ಆರಂಭದಿಂದಲೇ ಈ ಕಾರ್ಯಕ್ರಮ ಜಾರಿಯಲ್ಲಿದ್ದು, ಲಾಕ್ಡೌನ್ ಮುಗಿಯುವ ತನಕ ಈ ಯೋಜನೆ ಮುಂದುವರಿಯಲಿದೆ. ರಾಮನಗರದ ನಗರ ಪ್ರದೇಶ, ಕೈಲಾಂಚ, ಕಸಬಾ ಹೋಬಳಿ ಹಾಗೂ ಕನಕಪುರ ತಾಲ್ಲೂಕಿನ ಮರಳವಾಡಿ ಹೋಬಳಿಯಲ್ಲಿ ಊಟ ವಿತರಣೆ ನಡೆಸಿದೆ. ಬೆಳಿಗ್ಗೆ ಹಾಗೂ ಮಧ್ಯಾಹ್ನ 2,500 ಮಂದಿಗೆ ಊಟೋಪಚಾರ, ರಾತ್ರಿ ಊಟಕ್ಕೆ 2 ಸಾವಿರ ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.</p>.<p>‘ಕುಮಾರಸ್ವಾಮಿ ಅವರ ಆಶಯದಂತೆ ಇದೇ ತಿಂಗಳ ೧ರಿಂದಲೇ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಲಾಕ್ಡೌನ್ ಪರಿಸ್ಥಿತಿ ಮುಗಿಯುವವರೆಗೂ ಈ ದಾಸೋಹ ನಿರಂತರವಾಗಿರಲಿದೆ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ರಾಜಶೇಖರ್ ತಿಳಿಸಿದರು.</p>.<p><strong>ಮಾಸ್ಕ್ ವಿತರಣೆಗೆ ಚಾಲನೆ:</strong> ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕುಮಾರಸ್ವಾಮಿ ಅವರಿಂದ ಜನರಿಗೆ 1 ಲಕ್ಷ ಮಾಸ್ಕ್ ವಿತರಿಸಲಾಗುತ್ತಿದ್ದು, ಬುಧವಾರ ಈ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.ಈ ಸಂದರ್ಭ ಜೆಡಿಎಸ್ ಪದಾಕಾರಿಗಳಾದ ಪ್ರಕಾಶ್, ಉಮೇಶ್, ಗೂಳಿ ಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>