<p><strong>ಮಾಗಡಿ:</strong> ತಾಲ್ಲೂಕಿನ ಹಾಲಶೆಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಪರಿಸರದಿಂದ ಹೆಚ್ಚು ಲಾಭ ಗಳಿಸುತ್ತಿರುವ ಮನುಷ್ಯ ಪರಿಸರಕ್ಕೆ ಮಾರಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದು, ಪರಿಸರ ರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಸ್ನೇಹ ಅಭಿಪ್ರಾಯಪಟ್ಟರು.</p>.<p>ಮರಗಳನ್ನು ಕಡಿಯುತ್ತಾ ಹೋದರೆ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಕೊಡುವುದಾದರೂ ಹೇಗೆ. ಹಣ ಕೊಟ್ಟು ಶುದ್ಧ ಗಾಳಿ ಪಡೆಯುವ ಸ್ಥಿತಿ ನಿರ್ಮಾಣವಾದರೂ ಅಚ್ಚರಿ ಪಡುವಂತಿಲ್ಲ. ಮರಗಳನ್ನು ಕಡಿದರೆ ಮಣ್ಣು ಸವಳಿಕೆ ಹೆಚ್ಚಾಗಿ ತೊಂದರೆ ಉಂಟಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರು ಆಲೋಚನೆ ಮಾಡಿ ಗಿಡಗಳನ್ನು ಬೆಳೆಸುವ ಕೆಲಸಕ್ಕೆ ಮುಂದಾಗಬೇಕು ಎಂದರು.</p>.<p>ಕೃಷಿ ವಿಸ್ತರಣಾಧಿಕಾರಿ ಡಾ.ಸೌಜನ್ಯ ಮಾತನಾಡಿ, ತಾಲ್ಲೂಕಿನಲ್ಲಿ ಅತಿ ಹೆಚ್ಚು ಗಿಡಮರಗಳನ್ನು ಬೆಳೆಸಿ ಪರಿಸರವನ್ನು ಸಮತೋಲನಕ್ಕೆ ತರುವ ಕೆಲಸ ಮಾಡಬೇಕು. ಜಿಕೆವಿಕೆ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಅನುಭವಗಳನ್ನು ಪಡೆದು ಉಪಯುಕ್ತ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ಬೆಳೆ ಶಾಸ್ತ್ರ ವಿಜ್ಞಾನಿ ಡಾ.ಪ್ರಮಿತ, ಶಾಲಾ ಮುಖ್ಯ ಶಿಕ್ಷಕರು, ಜಿಕೆವಿಕೆ ಅಂತಿಮ ವರ್ಷದ ವಿದ್ಯಾರ್ಥಿನಿಯರು ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ:</strong> ತಾಲ್ಲೂಕಿನ ಹಾಲಶೆಟ್ಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಪರಿಸರದಿಂದ ಹೆಚ್ಚು ಲಾಭ ಗಳಿಸುತ್ತಿರುವ ಮನುಷ್ಯ ಪರಿಸರಕ್ಕೆ ಮಾರಕ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದು, ಪರಿಸರ ರಕ್ಷಣೆ ಮಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥೆ ಡಾ.ಸ್ನೇಹ ಅಭಿಪ್ರಾಯಪಟ್ಟರು.</p>.<p>ಮರಗಳನ್ನು ಕಡಿಯುತ್ತಾ ಹೋದರೆ ಮುಂದಿನ ಪೀಳಿಗೆಗೆ ಶುದ್ಧ ಗಾಳಿ ಕೊಡುವುದಾದರೂ ಹೇಗೆ. ಹಣ ಕೊಟ್ಟು ಶುದ್ಧ ಗಾಳಿ ಪಡೆಯುವ ಸ್ಥಿತಿ ನಿರ್ಮಾಣವಾದರೂ ಅಚ್ಚರಿ ಪಡುವಂತಿಲ್ಲ. ಮರಗಳನ್ನು ಕಡಿದರೆ ಮಣ್ಣು ಸವಳಿಕೆ ಹೆಚ್ಚಾಗಿ ತೊಂದರೆ ಉಂಟಾಗುತ್ತದೆ. ಈ ಬಗ್ಗೆ ಪ್ರತಿಯೊಬ್ಬರು ಆಲೋಚನೆ ಮಾಡಿ ಗಿಡಗಳನ್ನು ಬೆಳೆಸುವ ಕೆಲಸಕ್ಕೆ ಮುಂದಾಗಬೇಕು ಎಂದರು.</p>.<p>ಕೃಷಿ ವಿಸ್ತರಣಾಧಿಕಾರಿ ಡಾ.ಸೌಜನ್ಯ ಮಾತನಾಡಿ, ತಾಲ್ಲೂಕಿನಲ್ಲಿ ಅತಿ ಹೆಚ್ಚು ಗಿಡಮರಗಳನ್ನು ಬೆಳೆಸಿ ಪರಿಸರವನ್ನು ಸಮತೋಲನಕ್ಕೆ ತರುವ ಕೆಲಸ ಮಾಡಬೇಕು. ಜಿಕೆವಿಕೆ ಅಂತಿಮ ವರ್ಷದ ಕೃಷಿ ವಿದ್ಯಾರ್ಥಿಗಳು ಗ್ರಾಮೀಣ ಭಾಗದ ಅನುಭವಗಳನ್ನು ಪಡೆದು ಉಪಯುಕ್ತ ಮಾಹಿತಿಯನ್ನು ಗ್ರಾಮಸ್ಥರಿಗೆ ತಿಳಿಸುವ ಕೆಲಸ ಮಾಡುತ್ತಿದ್ದಾರೆಂದು ಹೇಳಿದರು.</p>.<p>ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ಬೆಳೆ ಶಾಸ್ತ್ರ ವಿಜ್ಞಾನಿ ಡಾ.ಪ್ರಮಿತ, ಶಾಲಾ ಮುಖ್ಯ ಶಿಕ್ಷಕರು, ಜಿಕೆವಿಕೆ ಅಂತಿಮ ವರ್ಷದ ವಿದ್ಯಾರ್ಥಿನಿಯರು ಗ್ರಾಮಸ್ಥರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>