<p><strong>ಚನ್ನಪಟ್ಟಣ:</strong> ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನಾಲ್ಕು ಆನೆಗಳು ರೈತರ ಬೆಳೆಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಗ್ರಾಮದ ಹಲವು ರೈತರ ಬಾಳೆ, ತೆಂಗು, ಟೊಮೆಟೊ ಬೆಳೆಗಳನ್ನು ನಾಶ ಮಾಡಿವೆ. ದೊಡ್ಡನಹಳ್ಳಿ ಅಕ್ಕಪಕ್ಕದ ಗ್ರಾಮಗಳಲ್ಲಿಯೂ ದಾಳಿ ನಡೆಸಿರುವ ಆನೆಗಳು ಅಲ್ಲಿಯೂ ರೈತರ ಬೆಳೆಗಳನ್ನು ಧ್ವಂಸ ಮಾಡಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಕಬ್ಬಾಳು ಹಾಗೂ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳು ಈ ಭಾಗದಲ್ಲಿ ಬೀಡು ಬಿಟ್ಟಿದ್ದು, ರಾತ್ರಿ ವೇಳೆ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>ಬೆಳಗಿನ ವೇಳೆಯಲ್ಲಿಯೂ ಆನೆಗಳು ಹೊಲ, ತೋಟಗಳಲ್ಲಿ ಓಡಾಡಿಕೊಂಡಿರುತ್ತವೆ. ಜುಲೈ 27ರಂದು ಗ್ರಾಮದ ರೈತ ಸತೀಶ್ ಅವರು ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಗಲು ಹೊತ್ತಿನಲ್ಲಿಯೇ ಹಿಂದಿನಿಂದ ಬಂದಿದ್ದ ಕಾಡಾನೆಯೊಂದು ದಾಳಿ ನಡೆಸಿ ಅವರನ್ನು ತುಳಿದು ಸಾಯಿಸಿತ್ತು. ಈ ಭಾಗದಲ್ಲಿ ಆನೆಗಳ ಉಪಟಳ ಮಿತಿಮೀರಿದೆ ಎಂದು ರೈತರು ತಿಳಿಸಿದ್ದಾರೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಕಾಡಿಗೆ ಓಡಿಸಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ಕೊಡಿಸಬೇಕು ಎಂದು ಗ್ರಾಮದ ಮುಖಂಡ ಬಿಳಿಯಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ದೊಡ್ಡನಹಳ್ಳಿಯಲ್ಲಿ ನಾಲ್ಕು ಆನೆಗಳು ರೈತರ ಬೆಳೆಗಳ ಮೇಲೆ ದಾಳಿ ನಡೆಸಿ ಧ್ವಂಸ ಮಾಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ.</p>.<p>ಗ್ರಾಮದ ಹಲವು ರೈತರ ಬಾಳೆ, ತೆಂಗು, ಟೊಮೆಟೊ ಬೆಳೆಗಳನ್ನು ನಾಶ ಮಾಡಿವೆ. ದೊಡ್ಡನಹಳ್ಳಿ ಅಕ್ಕಪಕ್ಕದ ಗ್ರಾಮಗಳಲ್ಲಿಯೂ ದಾಳಿ ನಡೆಸಿರುವ ಆನೆಗಳು ಅಲ್ಲಿಯೂ ರೈತರ ಬೆಳೆಗಳನ್ನು ಧ್ವಂಸ ಮಾಡಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಕಬ್ಬಾಳು ಹಾಗೂ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಈ ಆನೆಗಳು ಈ ಭಾಗದಲ್ಲಿ ಬೀಡು ಬಿಟ್ಟಿದ್ದು, ರಾತ್ರಿ ವೇಳೆ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ರೈತರು ಆರೋಪಿಸಿದ್ದಾರೆ.</p>.<p>ಬೆಳಗಿನ ವೇಳೆಯಲ್ಲಿಯೂ ಆನೆಗಳು ಹೊಲ, ತೋಟಗಳಲ್ಲಿ ಓಡಾಡಿಕೊಂಡಿರುತ್ತವೆ. ಜುಲೈ 27ರಂದು ಗ್ರಾಮದ ರೈತ ಸತೀಶ್ ಅವರು ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಗಲು ಹೊತ್ತಿನಲ್ಲಿಯೇ ಹಿಂದಿನಿಂದ ಬಂದಿದ್ದ ಕಾಡಾನೆಯೊಂದು ದಾಳಿ ನಡೆಸಿ ಅವರನ್ನು ತುಳಿದು ಸಾಯಿಸಿತ್ತು. ಈ ಭಾಗದಲ್ಲಿ ಆನೆಗಳ ಉಪಟಳ ಮಿತಿಮೀರಿದೆ ಎಂದು ರೈತರು ತಿಳಿಸಿದ್ದಾರೆ.</p>.<p>ಅರಣ್ಯ ಇಲಾಖೆ ಅಧಿಕಾರಿಗಳು ಆನೆಗಳನ್ನು ಕಾಡಿಗೆ ಓಡಿಸಲು ಕ್ರಮ ಕೈಗೊಳ್ಳಬೇಕು. ಹಾಗೆಯೇ ಬೆಳೆ ಕಳೆದುಕೊಂಡಿರುವ ರೈತರಿಗೆ ಪರಿಹಾರ ಕೊಡಿಸಬೇಕು ಎಂದು ಗ್ರಾಮದ ಮುಖಂಡ ಬಿಳಿಯಪ್ಪ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>