ನೋವು ಮತ್ತು ನೊಣಗಳಿಂದ ತಪ್ಪಿಸಿಕೊಳ್ಳಲು ನೀರಿನಲ್ಲಿ ನಿಂತಿದ್ದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಮೂರು ದಿನಗಳಿಂದ ನಿಗಾ ಇಟ್ಟಿದ್ದರು. ಗೋಪಾಲಸ್ವಾಮಿ ಹಾಗೂ ಅಭಿಮನ್ಯು ಆನೆಗಳ ಸಹಾಯ ಪಡೆದು ಡಾ.ಉಮಾಶಂಕರ್ ಮತ್ತು ಡಾ.ಮಂಜುನಾಥ ಸಲಗಕ್ಕೆ ಅರವಳಿಕೆ ನೀಡಿ ಆ್ಯಂಟಿಬಯೋಟಿಕ್ ಮತ್ತು ನೋವು ನಿವಾರಕ ಚುಚ್ಚುಮದ್ದು ನೀಡಿದ್ದಾರೆ. ಗಾಯ ಮಾಯುವ ತನಕ ನಿರಂತರ ನಿಗಾ ಇಡಲು ಅರಣ್ಯ ಇಲಾಖೆ ಸೂಚಿಸಿದೆ. ಸಲಗಕ್ಕೆ 25 ವರ್ಷ ವಯಸ್ಸಾಗಿದ್ದು ಲದ್ದಿ, ಗಂಜಲದಿಂದಾಗಿ ಗಾಯ ಹರಡಿ ಹುಳು ಬಂದಿತ್ತು. 50 ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದರು.