ಬಿಡದಿಯಲ್ಲಿ ಗುರುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಜಯಚಂದ್ರ ಈ ನೋಟ್ ತಂದಿದ್ದು, ಇದಕ್ಕೆ ಅವರೇ ಸಹಿ ಹಾಕಿದ್ದಾರೆ. ಇದೇ ಕಾರಣಕ್ಕೆ ಗುರುವಾರ ಸದನದಲ್ಲಿ ಬಿಜೆಪಿ ನಾಯಕರಿಂದ ಸಿದ್ದರಾಮಯ್ಯ ಮಂಗಳಾರತಿ ಮಾಡಿಸಿಕೊಂಡಿದ್ದಾರೆ. ಇನ್ನೂ ಯಾವ ಮುಖ ಹೊತ್ತುಕೊಂಡು ಮತಾಂತರ ನಿಷೇಧದ ಬಗ್ಗೆ ಮಾತನಾಡುತ್ತಾರೆ’ ಎಂದು ಪ್ರಶ್ನಿಸಿದರು.