‘2011ನೇ ಸಾಲಿನಲ್ಲೇ ಸರ್ವೆ ಸಂಖ್ಯೆ 96, 97ರ ಭೂಮಿಗೆ ಎಕರೆಗೆ ₹30 ಲಕ್ಷ ಪಾವತಿಯಾಗಿದೆ. ಹೀಗೆ ಮಾರಾಟದ ಹಣ ಪಡೆದುಕೊಂಡ ಚೆಕ್ ಬ್ಯಾಂಕ್ವೊಂದರಲ್ಲಿನ ಖಾತೆಗೆ ಜಮೆ ಆಗಿದೆ. ಸದರಿ ಖಾತೆ ತೆರೆದ ದಿನವೇ ಹಣ ಜಮೆ ಆಗಿದೆ, ಹಣವನ್ನು ಡ್ರಾ ಮಾಡಲಾಗಿದೆ. ಅದೇ ದಿನ ಬ್ಯಾಂಕ್ ಖಾತೆ ಕ್ಲೋಸ್ ಆಗಿದೆ’ ಎಂದು ಭ್ರಷ್ಟಾಚಾರ ನಡೆದಿರುವ ಕುರಿತು ಪರೋಕ್ಷವಾಗಿ ಆರೋಪಿಸಿದರು.