<p><strong>ಕನಕಪುರ:</strong> ಕುರಿಗಳ ಮೈ ಕೊಳೆಯಾಗಿದೆ ಎಂದು ಕೆರೆಯಲ್ಲಿ ತೊಳೆಯಲು ಹೋದ ತಂದೆ ಮತ್ತು ಮಗ ನೀರು ಪಾಲಾದ ಘಟನೆ ಕುರುಬಳ್ಳಿ ಗ್ರಾಮದಲ್ಲಿ ಶುಕ್ರವಾರ ನಡಿದಿದೆ.</p><p>ಮೃತರನ್ನು ತಾಲ್ಲೂಕಿನ ಸಾತನೂರು ಹೋಬಳಿ ಕುರುಬಳ್ಳಿ ಗ್ರಾಮದ ರಾಜು (50) ಮತ್ತು ಅವರ ಮಗ ಪ್ರಸನ್ನ (23) ಎಂದು ಗುರುತಿಸಲಾಗಿದೆ.</p><p>ಇವರು ಮೂಲತಃ ಕುರಿ ಸಾಕಾಣಿಕೆಯನ್ನೇ ಕಸುಬಾಗಿಸಿಕೊಂಡು ಬಂದಿದ್ದವರು. ತಂದೆ ಮತ್ತು ಮಗ ಇಬ್ಬರು ಸೇರಿ ಕುರುಬಳ್ಳಿ ಗೇಟ್ ಬಳಿಯ ಕುರುಬಳ್ಳಿ ಹಳೆ ಕೆರೆಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಕುರಿಗಳ ಮೈ ತೊಳೆಯಲು ಹೋಗಿದ್ದಾರೆ.</p><p>ಈ ಸಂದರ್ಭದಲ್ಲಿ ಒಬ್ಬರು ಕಾಲುಜಾರಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ಕಾಪಾಡಲು ಮತ್ತೊಬ್ಬರು ಹೋಗಿ ಅವರು ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.</p><p>ಘಟನೆ ಆದ ಸ್ವಲ್ಪ ಸಮಯದ ನಂತರ ಅಕ್ಕಪಕ್ಕದಲ್ಲಿ ಕುರಿ ಮೇಯಿಸುತ್ತಿದ್ದವರು ಅನುಮಾನಗೊಂಡು ನೋಡಿದಾಗ ತಂದೆ ಮತ್ತು ಮಗ ನೀರಿನಲ್ಲಿ ಮುಳುಗಿರುವುದು ಗೊತ್ತಾಗಿದೆ. ತಕ್ಷಣವೇ ಗ್ರಾಮದ ಜನತೆಗೆ ಮತ್ತು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.</p><p>ಅಗ್ನಿಶಾಮಕ ದಳದವರು ತೆಪ್ಪ ಮತ್ತು ಬಲೆಯನ್ನು ಬಳಸಿ ಕೆರೆಯಲ್ಲಿ ಶೋಧ ನಡೆಸಿ ಮುಳುಗಿದ್ದ ತಂದೆ ಮತ್ತು ಮಗನ ಶವವನ್ನು ಹೊರತೆಗೆದಿದ್ದಾರೆ. ಎರಡು ಮೃತದೇಹವನ್ನು ಹೊರ ತೆಗೆಯುತ್ತಿದ್ದಂತೆ ಮೃತರ ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>ಮೃತರ ಅಂತ್ಯಸಂಸ್ಕಾರವನ್ನು ಕುರುಬಳ್ಳಿ ಗ್ರಾಮದಲ್ಲಿ ಶನಿವಾರ ನೆರವೇರಿಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕನಕಪುರ:</strong> ಕುರಿಗಳ ಮೈ ಕೊಳೆಯಾಗಿದೆ ಎಂದು ಕೆರೆಯಲ್ಲಿ ತೊಳೆಯಲು ಹೋದ ತಂದೆ ಮತ್ತು ಮಗ ನೀರು ಪಾಲಾದ ಘಟನೆ ಕುರುಬಳ್ಳಿ ಗ್ರಾಮದಲ್ಲಿ ಶುಕ್ರವಾರ ನಡಿದಿದೆ.</p><p>ಮೃತರನ್ನು ತಾಲ್ಲೂಕಿನ ಸಾತನೂರು ಹೋಬಳಿ ಕುರುಬಳ್ಳಿ ಗ್ರಾಮದ ರಾಜು (50) ಮತ್ತು ಅವರ ಮಗ ಪ್ರಸನ್ನ (23) ಎಂದು ಗುರುತಿಸಲಾಗಿದೆ.</p><p>ಇವರು ಮೂಲತಃ ಕುರಿ ಸಾಕಾಣಿಕೆಯನ್ನೇ ಕಸುಬಾಗಿಸಿಕೊಂಡು ಬಂದಿದ್ದವರು. ತಂದೆ ಮತ್ತು ಮಗ ಇಬ್ಬರು ಸೇರಿ ಕುರುಬಳ್ಳಿ ಗೇಟ್ ಬಳಿಯ ಕುರುಬಳ್ಳಿ ಹಳೆ ಕೆರೆಯಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸಮಯದಲ್ಲಿ ಕುರಿಗಳ ಮೈ ತೊಳೆಯಲು ಹೋಗಿದ್ದಾರೆ.</p><p>ಈ ಸಂದರ್ಭದಲ್ಲಿ ಒಬ್ಬರು ಕಾಲುಜಾರಿ ನೀರಿನಲ್ಲಿ ಮುಳುಗಿದ್ದಾರೆ. ಅವರನ್ನು ಕಾಪಾಡಲು ಮತ್ತೊಬ್ಬರು ಹೋಗಿ ಅವರು ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ.</p><p>ಘಟನೆ ಆದ ಸ್ವಲ್ಪ ಸಮಯದ ನಂತರ ಅಕ್ಕಪಕ್ಕದಲ್ಲಿ ಕುರಿ ಮೇಯಿಸುತ್ತಿದ್ದವರು ಅನುಮಾನಗೊಂಡು ನೋಡಿದಾಗ ತಂದೆ ಮತ್ತು ಮಗ ನೀರಿನಲ್ಲಿ ಮುಳುಗಿರುವುದು ಗೊತ್ತಾಗಿದೆ. ತಕ್ಷಣವೇ ಗ್ರಾಮದ ಜನತೆಗೆ ಮತ್ತು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ.</p><p>ಅಗ್ನಿಶಾಮಕ ದಳದವರು ತೆಪ್ಪ ಮತ್ತು ಬಲೆಯನ್ನು ಬಳಸಿ ಕೆರೆಯಲ್ಲಿ ಶೋಧ ನಡೆಸಿ ಮುಳುಗಿದ್ದ ತಂದೆ ಮತ್ತು ಮಗನ ಶವವನ್ನು ಹೊರತೆಗೆದಿದ್ದಾರೆ. ಎರಡು ಮೃತದೇಹವನ್ನು ಹೊರ ತೆಗೆಯುತ್ತಿದ್ದಂತೆ ಮೃತರ ಪತ್ನಿ ಹಾಗೂ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.</p><p>ಮೃತರ ಅಂತ್ಯಸಂಸ್ಕಾರವನ್ನು ಕುರುಬಳ್ಳಿ ಗ್ರಾಮದಲ್ಲಿ ಶನಿವಾರ ನೆರವೇರಿಸುವುದಾಗಿ ಕುಟುಂಬದವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>