<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಬೇವೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ನಗರದ ಚಂದ್ರು ಡಯಗ್ನೋಸ್ಟಿಕ್ ಸೆಂಟರ್ ವತಿಯಿಂದ ಬೇವೂರು ಗ್ರಾಮದ ಎಂಪಿಸಿಎಸ್ ಆವರಣದಲ್ಲಿ ಶುಕ್ರವಾರ ಮಧುಮೇಹ, ರಕ್ತದೊತ್ತಡ ಉಚಿತ ತಪಾಸಣೆ ಹಾಗೂ ಔಷಧಿ ವಿತರಣೆ ಶಿಬಿರ ನಡೆಯಿತು.</p>.<p>ಚಾಲನೆ ನೀಡಿ ಮಾತನಾಡಿದ ಎಂಪಿಸಿಎಸ್ ಸಿಇಒ ರಾಮಯ್ಯ, ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡ ಸಾಮಾನ್ಯ ಎಂಬಂತಾಗಿದೆ. ಮನುಷ್ಯನ ಒತ್ತಡದ ಬದುಕಿನಲ್ಲಿ ಈ ಬಗ್ಗೆ ಗಮನ ನೀಡದೆ ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಇವು ಸಾಮಾನ್ಯವಾಗಿ ಮನುಷ್ಯನನ್ನು ಕಾಡಲಾರಂಭಿಸಿವೆ ಎಂದರು.</p>.<p>ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನ ನೀಡುವುದು ಬಹಳ ಮುಖ್ಯ. ಇಂತಹ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರ ಸಂಘದ ಸದಸ್ಯರು ಶಿಬಿರದಲ್ಲಿ ತಪಾಸಣೆಗೆ ಒಳಗಾದರು.</p>.<p>ಶಿಬಿರದ ಉಸ್ತುವಾರಿಗಳಾದ ಪಾರ್ಥಸಾರಥಿ, ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಪಟ್ಟಣ:</strong> ತಾಲ್ಲೂಕಿನ ಬೇವೂರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ನಗರದ ಚಂದ್ರು ಡಯಗ್ನೋಸ್ಟಿಕ್ ಸೆಂಟರ್ ವತಿಯಿಂದ ಬೇವೂರು ಗ್ರಾಮದ ಎಂಪಿಸಿಎಸ್ ಆವರಣದಲ್ಲಿ ಶುಕ್ರವಾರ ಮಧುಮೇಹ, ರಕ್ತದೊತ್ತಡ ಉಚಿತ ತಪಾಸಣೆ ಹಾಗೂ ಔಷಧಿ ವಿತರಣೆ ಶಿಬಿರ ನಡೆಯಿತು.</p>.<p>ಚಾಲನೆ ನೀಡಿ ಮಾತನಾಡಿದ ಎಂಪಿಸಿಎಸ್ ಸಿಇಒ ರಾಮಯ್ಯ, ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡ ಸಾಮಾನ್ಯ ಎಂಬಂತಾಗಿದೆ. ಮನುಷ್ಯನ ಒತ್ತಡದ ಬದುಕಿನಲ್ಲಿ ಈ ಬಗ್ಗೆ ಗಮನ ನೀಡದೆ ನಿರ್ಲಕ್ಷ್ಯ ವಹಿಸುತ್ತಿರುವ ಕಾರಣ ಇವು ಸಾಮಾನ್ಯವಾಗಿ ಮನುಷ್ಯನನ್ನು ಕಾಡಲಾರಂಭಿಸಿವೆ ಎಂದರು.</p>.<p>ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನ ನೀಡುವುದು ಬಹಳ ಮುಖ್ಯ. ಇಂತಹ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದರು.</p>.<p>ಗ್ರಾಮಸ್ಥರು ಹಾಗೂ ಹಾಲು ಉತ್ಪಾದಕರ ಸಂಘದ ಸದಸ್ಯರು ಶಿಬಿರದಲ್ಲಿ ತಪಾಸಣೆಗೆ ಒಳಗಾದರು.</p>.<p>ಶಿಬಿರದ ಉಸ್ತುವಾರಿಗಳಾದ ಪಾರ್ಥಸಾರಥಿ, ಗಂಗಾಧರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>