‘ಇಒ ಅವರು ಸೋಮವಾರ ಅಥವಾ ಮಂಗಳವಾರ ರಿಪೇರಿ ಮಾಡಿಸುವುದಾಗಿ ಹೇಳಿದ್ದರು. ಆದರೆ, ಅವರು ದುರಸ್ತಿಗೆ ಕ್ರಮವಹಿಸಿಲ್ಲ. ಗ್ರಾಮದಲ್ಲಿನ ಸಮಸ್ಯೆಯನ್ನು ಅಧಿಕಾರಿಗಳ ಗಮನಕ್ಕೆ ತಂದರೂ ಪರಿಹರಿಸುತ್ತಿಲ್ಲ. ಶೀಘ್ರವೇ ಬಗೆಹರಿಸಬೇಕು. ಇಲ್ಲವಾದರೆ ಪಂಚಾಯಿತಿ ಮುಂಭಾಗ ಧರಣಿ ನಡೆಸಲಾಗುವುದು’ ಎಂದು ಗ್ರಾಮದ ಮುಖಂಡರಾದ ಟಿ.ಕೆ. ಚಿಕ್ಕರಾಜು, ದೊಡ್ಡತಿಮ್ಮಯ್ಯ, ಗೋಪಾಲ್, ಶ್ರೀನಿವಾಸ್, ವೆಂಕಟಾಚಲ ಎಚ್ಚರಿಕೆ ನೀಡಿದ್ದಾರೆ.