ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಪತ್ರಕರ್ತರ ಜತೆ ಅವರು ಮಾತನಾಡಿದರು. ಪ್ರತಿಯೊಬ್ಬ ನೌಕರರಿಗೂ ಕನಿಷ್ಠ ವೇತನ ನೀಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ನಿಯಮ ರೂಪಿಸಿವೆ. ಆದರೆ, ಇಂದಿಗೂ ಆಶಾ ಕಾರ್ಯಕರ್ತೆಯರನ್ನು ಕೇವಲ ₹4 ಸಾವಿರಕ್ಕೆ ದುಡಿಸಿಕೊಳ್ಳುತ್ತಿರುವುದು ವಿಷಾದನೀಯ. ಇರುವ ವೇತನದೊಂದಿಗೆ ಇನ್ನು ₹6-8ಸಾವಿರ ವೇತನ ಹೆಚ್ಚಳಕ್ಕೆ ಅವರು ಆಗ್ರಹಿಸಿದ್ದಾರೆ. ಹಗಲು-ಇರುಳೆನ್ನದೇ ತಮ್ಮ ಜೀವದ ಹಂಗು ತೊರೆದು ದುಡಿಯುತ್ತಿರುವ ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.