<p><strong>ರಾಮನಗರ:</strong> ’ರಾಜ್ಯ ಸರ್ಕಾರಕ್ಕೆ ಸ್ವಲ್ಪವಾದರೂ ಮಾನ-ಮರ್ಯಾದೆ ಇದ್ದರೆ ಆಶಾ ಕಾರ್ಯಕತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು’ ಎಂದು ಸಂಸದ ಡಿ.ಕೆ. ಸುರೇಶ್ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಪತ್ರಕರ್ತರ ಜತೆ ಅವರು ಮಾತನಾಡಿದರು. ಪ್ರತಿಯೊಬ್ಬ ನೌಕರರಿಗೂ ಕನಿಷ್ಠ ವೇತನ ನೀಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ನಿಯಮ ರೂಪಿಸಿವೆ. ಆದರೆ, ಇಂದಿಗೂ ಆಶಾ ಕಾರ್ಯಕರ್ತೆಯರನ್ನು ಕೇವಲ ₹4 ಸಾವಿರಕ್ಕೆ ದುಡಿಸಿಕೊಳ್ಳುತ್ತಿರುವುದು ವಿಷಾದನೀಯ. ಇರುವ ವೇತನದೊಂದಿಗೆ ಇನ್ನು ₹6-8ಸಾವಿರ ವೇತನ ಹೆಚ್ಚಳಕ್ಕೆ ಅವರು ಆಗ್ರಹಿಸಿದ್ದಾರೆ. ಹಗಲು-ಇರುಳೆನ್ನದೇ ತಮ್ಮ ಜೀವದ ಹಂಗು ತೊರೆದು ದುಡಿಯುತ್ತಿರುವ ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಪೂರ್ಣ ಆಸ್ಪತ್ರೆ ಮೀಸಲಿಡಿ:</strong> ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಜಿಲ್ಲೆಗಾಗಿ 600 ಹಾಸಿಗೆ ನೀಡಲು ಮುಂದಾಗಿದ್ದಾರೆ. ಇಡೀ ಆಸ್ಪತ್ರೆಯನ್ನೇ ಜಿಲ್ಲೆಗೆ ನೀಡಲು ಜಿಲ್ಲಾಧಿಕಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸರ್ಕಾರ ಇದಕ್ಕೆ ಒಪ್ಪಿಗೆ ನೀಡಬೇಕು ಎಂದು ಸುರೇಶ್ ಹೇಳಿದರು.</p>.<p>ದಯಾನಂದ ಸಾಗರ್ ಆಸ್ಪತ್ರೆಯು 60 ಹಾಸಿಗೆಗಳನ್ನು ನೀಡಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿಯು ಹಾಸಿಗೆ ಇದೆ . ಮುಂದಿನ ದಿನಗಳಲ್ಲಿ ಎಲ್ಲ ತಾಲ್ಲೂಕುಗಳ ಹಾಸ್ಟೆಲ್ ಹಾಗು ಕ್ವಾರೆಂಟೈನ್ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡಲು ಸಿದ್ಧತೆ ನಡೆಯುತ್ತಿದೆ. ಎಲ್ಲ ತಾಲ್ಲೂಕು ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸರ್ಕಾರದ ಅನುಮತಿ ಕೇಳಲಾಗಿದೆ ಎಂದರು.</p>.<p>ಕ್ವಾರೆಂಟೈನ್ ಕೇಂದ್ರಗಳಲ್ಲಿ ಇರುವವರಿಗೆ ಸರ್ಕಾರ ಈಗ ಪೌಷ್ಟಿಕ ಆಹಾರ ವಿತರಿಸಲು ಸರ್ಕಾರ ಮುಂದಾಗಿದೆ. ನಾವು ಈಗಾಗಲೇ ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಕಾರ್ಯ ಮಾಡಿದ್ದೇವೆ ಎಂದರು.</p>.<p><strong>ಭಯ ಬೇಡ:</strong> ಕೊರೊನಾ ಬಗ್ಗೆ ಜನರು ಅನಗತ್ಯವಾಗಿ ಆತಂಕ ಪಡುವ ಅಗತ್ಯ ಇಲ್ಲ. ಜಿಲ್ಲೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ತಡ ಮಾಡಿದರೆ ಇಡೀ ಕುಟುಂಬಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ:</strong> ’ರಾಜ್ಯ ಸರ್ಕಾರಕ್ಕೆ ಸ್ವಲ್ಪವಾದರೂ ಮಾನ-ಮರ್ಯಾದೆ ಇದ್ದರೆ ಆಶಾ ಕಾರ್ಯಕತೆಯರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು’ ಎಂದು ಸಂಸದ ಡಿ.ಕೆ. ಸುರೇಶ್ ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳೊಂದಿಗಿನ ಸಭೆಯ ಬಳಿಕ ಪತ್ರಕರ್ತರ ಜತೆ ಅವರು ಮಾತನಾಡಿದರು. ಪ್ರತಿಯೊಬ್ಬ ನೌಕರರಿಗೂ ಕನಿಷ್ಠ ವೇತನ ನೀಡಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೇ ನಿಯಮ ರೂಪಿಸಿವೆ. ಆದರೆ, ಇಂದಿಗೂ ಆಶಾ ಕಾರ್ಯಕರ್ತೆಯರನ್ನು ಕೇವಲ ₹4 ಸಾವಿರಕ್ಕೆ ದುಡಿಸಿಕೊಳ್ಳುತ್ತಿರುವುದು ವಿಷಾದನೀಯ. ಇರುವ ವೇತನದೊಂದಿಗೆ ಇನ್ನು ₹6-8ಸಾವಿರ ವೇತನ ಹೆಚ್ಚಳಕ್ಕೆ ಅವರು ಆಗ್ರಹಿಸಿದ್ದಾರೆ. ಹಗಲು-ಇರುಳೆನ್ನದೇ ತಮ್ಮ ಜೀವದ ಹಂಗು ತೊರೆದು ದುಡಿಯುತ್ತಿರುವ ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.</p>.<p><strong>ಪೂರ್ಣ ಆಸ್ಪತ್ರೆ ಮೀಸಲಿಡಿ:</strong> ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಜಿಲ್ಲೆಗಾಗಿ 600 ಹಾಸಿಗೆ ನೀಡಲು ಮುಂದಾಗಿದ್ದಾರೆ. ಇಡೀ ಆಸ್ಪತ್ರೆಯನ್ನೇ ಜಿಲ್ಲೆಗೆ ನೀಡಲು ಜಿಲ್ಲಾಧಿಕಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಸರ್ಕಾರ ಇದಕ್ಕೆ ಒಪ್ಪಿಗೆ ನೀಡಬೇಕು ಎಂದು ಸುರೇಶ್ ಹೇಳಿದರು.</p>.<p>ದಯಾನಂದ ಸಾಗರ್ ಆಸ್ಪತ್ರೆಯು 60 ಹಾಸಿಗೆಗಳನ್ನು ನೀಡಿದೆ. ಜಿಲ್ಲೆಯ ಕೋವಿಡ್ ಆಸ್ಪತ್ರೆಯಲ್ಲಿಯು ಹಾಸಿಗೆ ಇದೆ . ಮುಂದಿನ ದಿನಗಳಲ್ಲಿ ಎಲ್ಲ ತಾಲ್ಲೂಕುಗಳ ಹಾಸ್ಟೆಲ್ ಹಾಗು ಕ್ವಾರೆಂಟೈನ್ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡಲು ಸಿದ್ಧತೆ ನಡೆಯುತ್ತಿದೆ. ಎಲ್ಲ ತಾಲ್ಲೂಕು ಆಸ್ಪತ್ರೆಗಳನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಸಲು ಸರ್ಕಾರದ ಅನುಮತಿ ಕೇಳಲಾಗಿದೆ ಎಂದರು.</p>.<p>ಕ್ವಾರೆಂಟೈನ್ ಕೇಂದ್ರಗಳಲ್ಲಿ ಇರುವವರಿಗೆ ಸರ್ಕಾರ ಈಗ ಪೌಷ್ಟಿಕ ಆಹಾರ ವಿತರಿಸಲು ಸರ್ಕಾರ ಮುಂದಾಗಿದೆ. ನಾವು ಈಗಾಗಲೇ ಡಿಕೆಎಸ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಈ ಕಾರ್ಯ ಮಾಡಿದ್ದೇವೆ ಎಂದರು.</p>.<p><strong>ಭಯ ಬೇಡ:</strong> ಕೊರೊನಾ ಬಗ್ಗೆ ಜನರು ಅನಗತ್ಯವಾಗಿ ಆತಂಕ ಪಡುವ ಅಗತ್ಯ ಇಲ್ಲ. ಜಿಲ್ಲೆಯಲ್ಲಿ ಉತ್ತಮ ಚಿಕಿತ್ಸೆ ದೊರೆಯುತ್ತಿದೆ. ಸೋಂಕಿನ ಲಕ್ಷಣಗಳು ಕಂಡುಬಂದ ಕೂಡಲೇ ಆಸ್ಪತ್ರೆಗೆ ದಾಖಲಾಗಬೇಕು. ತಡ ಮಾಡಿದರೆ ಇಡೀ ಕುಟುಂಬಕ್ಕೆ ಸೋಂಕು ಹರಡುವ ಸಾಧ್ಯತೆ ಇದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>