ಬಿಡದಿ: ಇಂದಿನ ಯುವ ಜನಾಂಗ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಅಧ್ಯಯನ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಎಂ. ಲಿಂಗಪ್ಪ ಸಲಹೆ ನೀಡಿದರು.
ಬಸವೇಶ್ವರ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಜ್ಞಾನ ವಿಕಾಸ ಪದವಿ ಕಾಲೇಜಿನಿಂದ ಜ್ಞಾನ ವಿಕಾಸ ಸಭಾಂಗಣದಲ್ಲಿ ನಡೆದ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಆರ್. ನಾಗರಾಜು, ನಿರ್ದೇಶಕ ಎಲ್. ಸತೀಶ್ ಚಂದ್ರ, ಬಿ.ಎನ್. ಗಂಗಾಧರಯ್ಯ, ಪ್ರಾಂಶುಪಾಲರಾದ ಶ್ರೀಧರ ಹೆಗ್ಗಡೆ, ಟಿ. ರೂಪಾ, ಆರ್. ಗಿರೀಶ್ ಉಪಸ್ಥಿತರಿದ್ದರು.