ಮಾಗಡಿ: ತಾಲ್ಲೂಕಿನಾದ್ಯಂತ ಶುಕ್ರವಾರ ಗಣೇಶ ಚತುರ್ಥಿಯನ್ನು ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸಲಾಯಿತು. ಕೆಲವರು ಮನೆಯಲ್ಲೂ ಗಣೇಶನ ಮೂರ್ತಿಯನ್ನಿಟ್ಟು ಪೂಜಿಸಿದರು. ಪಟ್ಟಣದ ಕಲ್ಯಾಬಾಗಿಲು ರಂಗನಾಥ್ ಎಲೆಕ್ಟ್ರಿಕ್ ಅಂಗಡಿಯಲ್ಲಿ ಮಿಕ್ಷಿ ಸೇರಿದಂತೆ ಇತರೆ ಯಂತ್ರಗಳನ್ನೇ ಗಣೇಶ ವಿಗ್ರಹದಂತೆ ಜೋಡಿಸಿ ಪೂಜಿಸಿದರು.
ಕಲ್ಯಾಬಾಗಿಲು ಸಾರ್ವಜನಿಕ ವಿನಾಯಕ ಸ್ವಾಮಿ ದೇವಾಲಯದಲ್ಲಿ ಗಣಪತಿ ಹೋಮ, ಅಭಿಷೇಕ ನೆರವೇರಿಸಿ ವಿಶೇಷವಾಗಿ ವಿನಾಯಕ ಚತುರ್ಥಿ ಆಚರಿಸಲಾಗುತ್ತಿದೆ. ಒಂಬತ್ತು ದಿನಗಳ ಕಾಲ ನಿತ್ಯ ವಿಶೇಷ ಪೂಜೆ ನಡೆಸಿ, ಸೇವಾಕರ್ತರು ಪ್ರಸಾದ ವಿತರಿಸುತ್ತಿದ್ದಾರೆ.