ಕನಕಪುರ: ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದ ಷಟಲ್ ಬ್ಯಾಡ್ಮಿಂಟನ್ ಡಬಲ್ಸ್ನಲ್ಲಿ ಕನಕಪುರ ಯೋಜನಾ ಪ್ರಾಧಿಕಾರದ ನೌಕರ ಗಣೇಶ್ ಗೆಲುವು ಸಾಧಿಸಿದ್ದಾರೆ.
ರಾಜ್ಯಮಟ್ಟದಲ್ಲಿ ಗೆಲುವು ಸಾಧಿಸಿ ತಾಲ್ಲೂಕಿಗೆ ಕೀರ್ತಿ ತಂದಿರುವುದಕ್ಕೆ ಕನಕಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಿಕ್ಕೆಂಪೇಗೌಡ ಮತ್ತು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.