ಕನಕಪುರ, ಹಾರೋಹಳ್ಳಿ, ರಾಮನಗರ ಸೇರಿದಂತೆ ಕೆಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್, ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಅವರಿದ್ದ ಗಿಫ್ಟ್ ಕಾರ್ಡ್ಗಳನ್ನು ಹಂಚುತ್ತಿರುವ ಆರೋಪ ಮಾಡಿದ್ದಾರೆ. ಕ್ಯೂ ಆರ್ ಕೋಡ್ ಜೊತೆಗೆ ಕ್ರಮ ಸಂಖ್ಯೆಯನ್ನು ಈ ಕಾರ್ಡ್ಗಳು ಹೊಂದಿವೆ.