ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ನ್ಯಾಯಾಲಯಗಳು ಯಾವ ನಿರ್ಬಂಧವನ್ನೂ ಹೇರಿಲ್ಲ. ತಮಿಳುನಾಡು ಸರ್ಕಾರಕ್ಕೆ ಈ ಬಗ್ಗೆ ಮಾಹಿತಿಯ ಕೊರತೆ ಹಾಗೂ ರಾಜಕೀಯ ಕಾರಣಗಳಿಗೆ ವಿರೋಧ ವ್ಯಕ್ತಪಡಿಸುತ್ತಿದೆ. ಕೇಂದ್ರ ಸಚಿವರಿಗೂ ಇದನ್ನು ಮನವರಿಕೆ ಮಾಡಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.