ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತಿಗಳ ಜನಾಂಗಕ್ಕೆ ಆದ್ಯತೆ ನೀಡಿ’

Last Updated 15 ಜೂನ್ 2020, 14:03 IST
ಅಕ್ಷರ ಗಾತ್ರ

ಮಾಗಡಿ: ವಿಧಾನ ಪರಿಷತ್‌ ಚುನಾವಣೆಯಲ್ಲಿ ಆಯ್ಕೆ ಸಂದರ್ಭದಲ್ಲಿ ನಿರ್ಲಕ್ಷಿತ ಸಮುದಾಯವಾದತಿಗಳ ಜನಾಂಗಕ್ಕೆ ಆದ್ಯತೆ ನೀಡುವಂತೆ ಕರ್ನಾಟಕ ರಾಜ್ಯ ತಿಗಳ ಮಹಾಸಭಾ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಗಿದೆ ಎಂದು ಬಿಜೆಪಿ ಮುಖಂಡ ಎ.ಎಚ್.ಬಸವರಾಜು ತಿಳಿಸಿದರು.

ಸುದ್ದಿಗಾರರೊಂದಿಗೆ ತಿಗಳರ ಸಂಘದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಮುದಾಯದ 40 ಲಕ್ಷ ಮಂದಿ ಇದ್ದಾರೆ. ಎಲ್ಲರೂಬಿಜೆಪಿ ಪಕ್ಷವನ್ನು ಬೆಂಬಲಿಸಿದ್ದೇವೆ. ಮಾಗಡಿ ತಾಲ್ಲೂಕಿನಲ್ಲಿ ನಮ್ಮ ಜನಾಂಗದ 13 ಸಾವಿರ ಮತದಾರರಿದ್ದಾರೆ. ಪರಿಷತ್‌ ಚುನಾವಣೆಯಲ್ಲಿ ಸಮುದಾಯದವರಿಗೂ ಆದ್ಯತೆ ನೀಡುವಂತೆ ಕೋರಲಾಗಿದೆ ಎಂದು ತಿಳಿಸಿದರು.

30 ವರ್ಷಗಳಿಂದಲೂ ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ್ದು, ನನಗೆ ಅವಕಾಶ ನೀಡಿದರೆ ಸಮುದಾಯದ ದನಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಹೇಳಿದರು.

ಬಿಬಿಎಂಪಿ ಸದಸ್ಯ ಶಿವಕುಮಾರ್‌, ನಿವೃತ್ತ ಎಸಿಪಿ ಸುಬ್ಬಣ್ಣ, ಪುರಸಭೆ ಸದಸ್ಯರಾದ ಅಶ್ವತ್ಥ, ಜಯರಾಮು, ವೆಂಕಟರಾಮು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT