<p><strong>ಮಾಗಡಿ</strong>: ಪಟ್ಟಣದ ಹೊಸಪೇಟೆ ವೃತ್ತದ ಬಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಿಂದ ನಿರ್ಮಾಣವಾಗುತ್ತಿರುವ ಗೋದಾಮನ್ನು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ವೀಕ್ಷಿಸಿದರು.</p>.<p>ನಿಗಮದ ಎಂಡಿ ತನಿಶಾಲಾಲ್ ಹಾಗೂ ಡಿಡಿ ಹರಿಪ್ರಸಾದ್ ಅವರು ಗೋದಾಮು ವೀಕ್ಷಿಸಿ, ಸಂಘದ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್ ಮಾತನಾಡಿ, ₹3.5 ಕೋಟಿ ವೆಚ್ಚದಲ್ಲಿ ಗೋದಾಮು ನಿರ್ಮಾಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರದ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಿಂದ ₹2 ಕೋಟಿ ಸಾಲ ನೀಡುವಂತೆ ಮನವಿ ಮಾಡಲಾಗಿದೆ. ಹಾಗಾಗಿ ಅಧಿಕಾರಿಗಳ ತಂಡ ಭೇಟಿ ನೀಡಿ ಸಂಘದ ಕಾರ್ಯ ವೈಖರಿಯನ್ನು ಪರಿಶೀಲಿಸಿ, ಸಾಲ ಬಿಡುಗಡೆ ಮಾಡುವ ಭರವಸೆ ನೀಡಿದರು ಎಂದರು.</p>.<p>ಅಂದಾಜು 2,300 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮನ್ನು ನಿರ್ಮಾಣ ಮಾಡಲಾಗುತ್ತಿದೆ. ಇನ್ನು ಐದು ತಿಂಗಳಲ್ಲಿ ಗೋದಾಮು ಕಾಮಗಾರಿ ಪೂರ್ಣಗೊಳ್ಳಲಿದೆ.</p>.<p>ಮುಂದಿನ ವರ್ಷ ಮಾಗಡಿಯಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಲಾಗುವುದು ಎಂದರು.</p>.<p>ರಾಜಣ್ಣ, ಸೋಮಶೇಖರ್, ಮಹದೇವಯ್ಯ, ರಮೇಶ್, ಗಂಗಣ್ಣ, ರಘು, ನಾರಾಯಣ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಗಡಿ</strong>: ಪಟ್ಟಣದ ಹೊಸಪೇಟೆ ವೃತ್ತದ ಬಳಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಿಂದ ನಿರ್ಮಾಣವಾಗುತ್ತಿರುವ ಗೋದಾಮನ್ನು ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ವೀಕ್ಷಿಸಿದರು.</p>.<p>ನಿಗಮದ ಎಂಡಿ ತನಿಶಾಲಾಲ್ ಹಾಗೂ ಡಿಡಿ ಹರಿಪ್ರಸಾದ್ ಅವರು ಗೋದಾಮು ವೀಕ್ಷಿಸಿ, ಸಂಘದ ಕಾರ್ಯ ವೈಖರಿ ಬಗ್ಗೆ ಪರಿಶೀಲನೆ ನಡೆಸಿದರು.</p>.<p>ಈ ವೇಳೆ ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್ ಮಾತನಾಡಿ, ₹3.5 ಕೋಟಿ ವೆಚ್ಚದಲ್ಲಿ ಗೋದಾಮು ನಿರ್ಮಾಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರದ ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮದಿಂದ ₹2 ಕೋಟಿ ಸಾಲ ನೀಡುವಂತೆ ಮನವಿ ಮಾಡಲಾಗಿದೆ. ಹಾಗಾಗಿ ಅಧಿಕಾರಿಗಳ ತಂಡ ಭೇಟಿ ನೀಡಿ ಸಂಘದ ಕಾರ್ಯ ವೈಖರಿಯನ್ನು ಪರಿಶೀಲಿಸಿ, ಸಾಲ ಬಿಡುಗಡೆ ಮಾಡುವ ಭರವಸೆ ನೀಡಿದರು ಎಂದರು.</p>.<p>ಅಂದಾಜು 2,300 ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾಮನ್ನು ನಿರ್ಮಾಣ ಮಾಡಲಾಗುತ್ತಿದೆ. ಇನ್ನು ಐದು ತಿಂಗಳಲ್ಲಿ ಗೋದಾಮು ಕಾಮಗಾರಿ ಪೂರ್ಣಗೊಳ್ಳಲಿದೆ.</p>.<p>ಮುಂದಿನ ವರ್ಷ ಮಾಗಡಿಯಲ್ಲಿ ರಾಗಿ ಖರೀದಿ ಕೇಂದ್ರ ಆರಂಭಿಸಿ ರೈತರಿಗೆ ಅನುಕೂಲ ಮಾಡಲಾಗುವುದು ಎಂದರು.</p>.<p>ರಾಜಣ್ಣ, ಸೋಮಶೇಖರ್, ಮಹದೇವಯ್ಯ, ರಮೇಶ್, ಗಂಗಣ್ಣ, ರಘು, ನಾರಾಯಣ್ ಸೇರಿದಂತೆ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>