ರಾಮನಗರ: ಲಾಕ್ಡೌನ್ ಕರೆಗೆ ಉತ್ತಮ ಸ್ಪಂದನೆ ದೊರೆತಿದ್ದು, ಭಾನುವಾರ ಮುಂಜಾನೆಯಿಂದ ರಾಮನಗರ ಜಿಲ್ಲೆ ಸಂಪೂರ್ಣ ಸ್ತಬ್ಧ ಆಗಿದೆ.
ಬಸ್ ಸಂಚಾರ ಸ್ಥಗಿತಗೊಂಡಿವೆ. ಅಂಗಡಿ ಮುಂಗಟ್ಟು ಮುಚ್ಚಿವೆ. ಹೋಟೆಲ್ ಗಳೂ ಬಂದ್ ಆಗಿವೆ. ರೇಷ್ಮೆ ಮಾರುಕಟ್ಟೆ ಸಹ ಬಂದ್ ಆಗಿದೆ. ಹಾಲು, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೆಲವೆಡೆ ಮಾಂಸ ಮಾರಾಟ ನಡೆದಿದೆ.
ಪೊಲೀಸರು ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿದ್ದು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವವರನ್ನು ಎಚ್ಚರಿಸುತ್ತಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಓಡಾಟ ಕಡಿಮೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.