ಯೋಗಶಿಕ್ಷಕಿ ರಾಧಿಕಾ ರವಿಕುಮಾರ್ ಗೌಡ ಮಾತನಾಡಿ, ‘ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಗುರು ಮಹತ್ವದ ಪಾತ್ರ ವಹಿಸುತ್ತಾನೆ. ತಮ್ಮೊಳಗಿನ ಕತ್ತಲೆಯನ್ನು ತೊಡೆದು ಬೆಳಕಿನ ಹಾದಿಗೆ ಕರೆದೊಯ್ಯುವ ಗುರುವಿನ ಪಾತ್ರ ಮಹತ್ವವಾದದ್ದು. ಗುರುವಿನ ಗುಲಾಮನಾಗುವ ತನಕ ದೊರಯದಣ್ಣ ಮುಕುತಿ ಎಂಬ ದಾಸರ ವಾಕ್ಯ ನಮ್ಮೆಲ್ಲರಿಗೂ ಆದರ್ಶವಾಗಬೇಕು’ ಎಂದರು.