<p><strong>ರಾಮನಗರ: </strong>ಮೇಕೆದಾಟು ಅಣೆಕಟ್ಟೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ರಾಜ್ಯ ಸರ್ಕಾರದ ಗಮನದ ಸೆಳೆಯುವ ಸಲುವಾಗಿ ಇಲ್ಲಿನ ಐಜೂರು ವೃತ್ತದಲ್ಲಿ ಗುರುವಾರ ಮೇಕೆಗೆ ಸನ್ಮಾನ ಮಾಡಿ ಪ್ರತಿಭಟನೆ ನಡೆಸಲಾಯಿತು.</p>.<p>ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಮಾತನಾಡಿ ‘ಮೇಕೆದಾಟು ಅಣೆಕಟ್ಟೆ ನಿರ್ಮಾಣ ಕಾಮಗಾರಿಯು ಕಳೆದ 5–6 ವರ್ಷದ ಹಿಂದೆಯೇ ಆರಂಭಗೊಂಡು ಈಗ ಮುಗಿಯಬೇಕಿತ್ತು. ಇದೀಗ ಕೇಂದ್ರ ಜಲ ಆಯೋಗದ ಅನುಮತಿಯೂ ದೊರೆತಿದೆ. ವಾಸ್ತವದಲ್ಲಿ ಈ ಕಾಮಗಾರಿಗೆ ಯಾರ ಅನುಮತಿಯೂ ಬೇಕಿಲ್ಲ. ಯಾವ ನ್ಯಾಯಾಲಯವೂ ತಡೆಯಾಜ್ಞೆ ನೀಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಈ ವಿಚಾರದಲ್ಲಿ ಮಂದಗತಿಯ ಧೋರಣೆ ಅನುಸರಿಸುತ್ತಿದೆ’ ಎಂದು ಟೀಕಿಸಿದರು.</p>.<p>ತಮಿಳುನಾಡಿಗೂ ಈ ಯೋಜನೆಗೂ ಸಂಬಂಧ ಇಲ್ಲ. ಯೋಜನೆಯಿಂದ ಅವರಿಗೆ ಯಾವುದೇ ಅನ್ಯಾಯ ಆಗುವುದಿಲ್ಲ. ನಮಗೆ ಕುಡಿಯಲು ನೀರು ಬಿಟ್ಟರೆ ಉಳಿದೆಲ್ಲ ನೀರು ತಮಿಳುನಾಡಿಗೇ ಹರಿಯುತ್ತದೆ. ಹೀಗಾಗಿ ಅವರೂ ಸಹಕರಿಸಬೇಕು ಎಂದು ಆಗ್ರಹಿಸಿದರು.</p>.<p>ಯೋಜನೆಗೆ ತಮಿಳುನಾಡು ಅಡ್ಡಿಯನ್ನು ಖಂಡಿಸಿ ಇದೇ 16ರಂದು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು. ಹೊಸೂರು ಬಳಿ ಕರ್ನಾಟಕ –ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಇದೇ ಧೋರಣೆ ಮುಂದುವರಿದರೆ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಇದೇ 10ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭ ಆಗಲಿದೆ. ಮೊದಲ ದಿನವೇ ಮುಖ್ಯಮಂತ್ರಿಗಳು ಯೋಜನೆಯ ಸಂಪೂರ್ಣ ವಿವರ ನೀಡಬೇಕು. ಜಲ ಸಂಪನ್ಮೂಲ ಸಚಿವರ ಕ್ಷೇತ್ರದಲ್ಲಿಯೇ ಈ ಅಣೆಕಟ್ಟೆ ನಿರ್ಮಾಣ ಆಗಲಿದೆ. ಈ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇದೆ. ಅವರು ಇನ್ನಷ್ಟು ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಜೊತೆಗಿದ್ದರು. ಬಳಿಕ ತಂಡವು ಮೇಕೆದಾಟಿಗೆ ತೆರಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಮೇಕೆದಾಟು ಅಣೆಕಟ್ಟೆ ನಿರ್ಮಾಣ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ರಾಜ್ಯ ಸರ್ಕಾರದ ಗಮನದ ಸೆಳೆಯುವ ಸಲುವಾಗಿ ಇಲ್ಲಿನ ಐಜೂರು ವೃತ್ತದಲ್ಲಿ ಗುರುವಾರ ಮೇಕೆಗೆ ಸನ್ಮಾನ ಮಾಡಿ ಪ್ರತಿಭಟನೆ ನಡೆಸಲಾಯಿತು.</p>.<p>ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ಮಾತನಾಡಿ ‘ಮೇಕೆದಾಟು ಅಣೆಕಟ್ಟೆ ನಿರ್ಮಾಣ ಕಾಮಗಾರಿಯು ಕಳೆದ 5–6 ವರ್ಷದ ಹಿಂದೆಯೇ ಆರಂಭಗೊಂಡು ಈಗ ಮುಗಿಯಬೇಕಿತ್ತು. ಇದೀಗ ಕೇಂದ್ರ ಜಲ ಆಯೋಗದ ಅನುಮತಿಯೂ ದೊರೆತಿದೆ. ವಾಸ್ತವದಲ್ಲಿ ಈ ಕಾಮಗಾರಿಗೆ ಯಾರ ಅನುಮತಿಯೂ ಬೇಕಿಲ್ಲ. ಯಾವ ನ್ಯಾಯಾಲಯವೂ ತಡೆಯಾಜ್ಞೆ ನೀಡಿಲ್ಲ. ಆದಾಗ್ಯೂ ಕರ್ನಾಟಕ ಸರ್ಕಾರ ಈ ವಿಚಾರದಲ್ಲಿ ಮಂದಗತಿಯ ಧೋರಣೆ ಅನುಸರಿಸುತ್ತಿದೆ’ ಎಂದು ಟೀಕಿಸಿದರು.</p>.<p>ತಮಿಳುನಾಡಿಗೂ ಈ ಯೋಜನೆಗೂ ಸಂಬಂಧ ಇಲ್ಲ. ಯೋಜನೆಯಿಂದ ಅವರಿಗೆ ಯಾವುದೇ ಅನ್ಯಾಯ ಆಗುವುದಿಲ್ಲ. ನಮಗೆ ಕುಡಿಯಲು ನೀರು ಬಿಟ್ಟರೆ ಉಳಿದೆಲ್ಲ ನೀರು ತಮಿಳುನಾಡಿಗೇ ಹರಿಯುತ್ತದೆ. ಹೀಗಾಗಿ ಅವರೂ ಸಹಕರಿಸಬೇಕು ಎಂದು ಆಗ್ರಹಿಸಿದರು.</p>.<p>ಯೋಜನೆಗೆ ತಮಿಳುನಾಡು ಅಡ್ಡಿಯನ್ನು ಖಂಡಿಸಿ ಇದೇ 16ರಂದು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ರಾಜ್ಯದಾದ್ಯಂತ ಹೋರಾಟ ಮಾಡಲಾಗುವುದು. ಹೊಸೂರು ಬಳಿ ಕರ್ನಾಟಕ –ತಮಿಳುನಾಡು ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು. ಇದೇ ಧೋರಣೆ ಮುಂದುವರಿದರೆ ಕರ್ನಾಟಕ ಬಂದ್ ಆಚರಿಸಲಾಗುವುದು ಎಂದು ಎಚ್ಚರಿಸಿದರು.</p>.<p>ಇದೇ 10ರಂದು ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭ ಆಗಲಿದೆ. ಮೊದಲ ದಿನವೇ ಮುಖ್ಯಮಂತ್ರಿಗಳು ಯೋಜನೆಯ ಸಂಪೂರ್ಣ ವಿವರ ನೀಡಬೇಕು. ಜಲ ಸಂಪನ್ಮೂಲ ಸಚಿವರ ಕ್ಷೇತ್ರದಲ್ಲಿಯೇ ಈ ಅಣೆಕಟ್ಟೆ ನಿರ್ಮಾಣ ಆಗಲಿದೆ. ಈ ಬಗ್ಗೆ ಅವರಿಗೆ ಸಾಕಷ್ಟು ಮಾಹಿತಿ ಇದೆ. ಅವರು ಇನ್ನಷ್ಟು ಆಸಕ್ತಿ ವಹಿಸಬೇಕು ಎಂದು ಆಗ್ರಹಿಸಿದರು.</p>.<p>ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಜೊತೆಗಿದ್ದರು. ಬಳಿಕ ತಂಡವು ಮೇಕೆದಾಟಿಗೆ ತೆರಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>