ಮನೆಗಳಲ್ಲಿ ಹಬ್ಬ ಆಚರಣೆಗೆ ಯಾವುದೇ ವಿಘ್ನ ಇಲ್ಲ. ಆದರೆ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ವಿವಿಧ ಇಲಾಖೆಗಳಿಂದ ಅನುಮತಿ ಕಡ್ಡಾಯವಾಗಿದೆ. ಸ್ಥಳೀಯ ಸಂಸ್ಥೆ, ಹತ್ತಿರದ ಪೊಲೀಸ್ ಠಾಣೆಯಲ್ಲಿ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವುದು ಕಡ್ಡಾಯ. ಜೊತೆಗೆ ಮೈದಾನದಲ್ಲಿ ಮೂರ್ತಿ ಪ್ರತಿಷ್ಠಾಪಿಸಿದರೆ, ಮೈದಾನದ ಉಸ್ತುವಾರಿ ಹೊತ್ತವರ ಬಳಿಯೂ ಅನುಮತಿ ಪಡೆಯಬೇಕಿದೆ. ಗ್ರಾಮಗಳಲ್ಲಿ ಸ್ಥಳೀಯ ಗ್ರಾಪಂನಿಂದ ಅನುಮತಿ ಪಡೆಯಬೇಕಿದೆ. ಈ ಮೂರು ಕಡೆ ಯಾರು ಮೊದಲು ಅನುಮತಿ ಪಡೆಯುತ್ತಾರೆಯೋ ಅವರು ಮಾತ್ರ ಗಣಪನನ್ನು ಕೂರಿಸಬಹುದಾಗಿದೆ. ಇಂತಹ ಸ್ಥಳಗಳಲ್ಲಿ ಕೇವಲ 20 ಮಂದಿಯಷ್ಟೇ ಭಾಗವಹಿಸಲು ಅವಕಾಶ ಇದೆ.