ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ರವಿಕುಮಾರ್ ಮಾತನಾಡಿ, ‘ಪಿಡಿಒ ರಘು ಅವರು ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಅನ್ನು ಗುರಿಯಾಗಿಸಿಕೊಂಡಿದ್ದು, ಪ್ರಜಾಧ್ವನಿಯ ಪ್ರಚಾರಕ್ಕೆ ಹಾಕಲಾಗಿದ್ದ ಬ್ಯಾನರ್ಗಳನ್ನು ತೆರವುಗೊಳಿಸಿದ್ದಾರೆ. ಆದರೆ, ಜೆಡಿಎಸ್ ಬ್ಯಾನರ್ಗಳು ರಾರಾಜಿಸುತ್ತಿವೆ. ಈ ಮೂಲಕ ಪಿಡಿಒ ಅವರು ಪಕ್ಷಪಾತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದು ಆರೋಪಿಸಿದರು.