ತಾವರೆಕೆರೆ ಗ್ರಾಮದ ನಿವಾಸಿಯೊಬ್ಬರು ಗಂಗೇನಹಳ್ಳಿ ಗ್ರಾಮದಲ್ಲಿರುವ 2 ಎಕರೆ 2 ಗುಂಟೆ ಜಮೀನನ್ನು ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಿಸಿಕೊಂಡಿದ್ದರು. ಇದಕ್ಕೆ ಇ–ಖಾತೆ ಮಾಡಿಕೊಡುವಂತೆ ಚೋಳನಾಯಕನಹಳ್ಳಿ ಗ್ರಾ.ಪಂ.ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಕೆಲಸಕ್ಕೆ ಪಂಚಾಯಿತಿಯ ಅಧ್ಯಕ್ಷೆ ಶ್ವೇತಾ ಮತ್ತು ಆಕೆಯ ಪತಿ ₹ 5 ಲಕ್ಷ ಲಂಚಕ್ಕೆ ಬೇಡಿಕೆಇಟ್ಟಿದ್ದರು.